ಆ್ಯಪ್ನಗರ

Puneeth Rajkumar: ಕಾರು ಅಪಘಾತದಲ್ಲಿ ನಟ ಪುನೀತ್‌ ಪಾರು

'ನಟ ಸಾರ್ವಭೌಮ' ಸಿನಿಮಾ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಕಾರು ಗುರುವಾರ ರಾತ್ರಿ ಅಪಘಾತಕ್ಕೊಳಗಾಗಿದ್ದು, ಅದೃಷ್ಟವಶಾತ್‌ ಪುನೀತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Vijaya Karnataka 8 Jun 2018, 5:00 am
ಬೆಂಗಳೂರು: 'ನಟ ಸಾರ್ವಭೌಮ' ಸಿನಿಮಾ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ನಟ ಪುನೀತ್‌ ರಾಜ್‌ಕುಮಾರ್‌ ಅವರ ಕಾರು ಗುರುವಾರ ರಾತ್ರಿ ಅಪಘಾತಕ್ಕೊಳಗಾಗಿದ್ದು, ಅದೃಷ್ಟವಶಾತ್‌ ಪುನೀತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Vijaya Karnataka Web 37abecc6-66c0-46cf-8528-4b5331352eb1



ಬಳ್ಳಾರಿಯಲ್ಲಿ ಚಿತ್ರೀಕರಣ ಮುಗಿಸಿ ಆಂಧ್ರದ ಅನಂತಪುರಂ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ಸಾಗುವಾಗ ಪುನೀತ್‌ ಅವರು ಪ್ರಯಾಣಿಸುತ್ತಿದ್ದ ರೇಂಜ್‌ ರೋವರ್‌ ಕಾರು ಅಪಘಾತಕ್ಕೀಡಾಗಿದೆ. ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಅಲ್ಲಿಂದ ಬೆಂಗಳೂರಿಗೆ ಹೋದರು ಎಂದು ಚಿತ್ರ ತಂಡದ ಮೂಲಗಳು ತಿಳಿಸಿವೆ. ನಿರ್ದೇಶಕ ಪವನ್‌ ಒಡೆಯರ್‌ ಈ ಕುರಿತು ಸುದ್ದಿವಾಹಿನಿಯೊಂದಿಗೆ ಮಾತನಾಡಿ, ''ಅಪಘಾತ ಆಗಿದ್ದು ನಿಜ. ಪುನೀತ್‌ ಅವರಿಗೆ ಏನೂ ಆಗಿಲ್ಲ. ನಾನು ಅವರ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ್ದೇನೆ,'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ