ಆ್ಯಪ್ನಗರ

ಪರಿಷತ್‌ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ! ಹೊರಟ್ಟಿ ರಾಜೀನಾಮೆ ಗೊಂದಲ ನಿವಾರಣೆ

ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಹಂಗಾಮಿ ಸಭಾಪತಿಯನ್ನಾಗಿ ರಘುನಾಥ್‌ ಮಲ್ಕಾಪುರೆ ಅವರನ್ನು ನೇಮಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಬಸವರಾಜ ಹೊರಟ್ಟಿ ಅವರು ಎಂಎಲ್‌ಸಿ ಸ್ಥಾನಕ್ಕೆ ನೀಡುತ್ತಿರುವ ರಾಜೀನಾಮೆ ಬಗ್ಗೆ ಎದ್ದಿದ್ದ ಗೊಂದಲ ನಿವಾರಣೆಯಾಗಿದೆ.

Reported byಇರ್ಷಾದ್ ಉಪ್ಪಿನಂಗಡಿ | Edited byಅವಿನಾಶ ವಗರನಾಳ | Vijaya Karnataka Web 17 May 2022, 4:07 pm

ಹೈಲೈಟ್ಸ್‌:


  • ಪರಿಷತ್‌ ಹಂಗಾಮಿ ಸಭಾಪತಿಯಾಗಿ ರಘುನಾಥ್‌ ಮಲ್ಕಾಪುರೆ ನೇಮಕ
  • ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನ
  • ಹೊರಟ್ಟಿ ಎಂಎಲ್‌ಸಿ ಸ್ಥಾನದ ರಾಜೀನಾಮೆ ಗೊಂದಲವೂ ನಿವಾರಣೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ragunath malkapure
ಬೆಂಗಳೂರು: ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಆದೇಶ ಹೊರಡಿಸಿದ್ದು, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಸವರಾಜ ಹೊರಟ್ಟಿ ನೀಡುತ್ತಿರುವ ರಾಜೀನಾಮೆ ಗೊಂದಲ ನಿವಾರಣೆಯಾಗಿದೆ.
ರಘುನಾಥ್ ಮಲ್ಕಾಪುರೆ ಅವರು ವಿಧಾನ ಪರಿಷತ್‌ ಹಂಗಾಮಿ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದ್ದು, ವಿಧಾನ ಪರಿಷತ್‌ನ ಕಾರ್ಯದರ್ಶಿ ಮಹಾಲಕ್ಷ್ಮೀ, ಅಧಿಕಾರಿಗಳು ಹಂಗಾಮಿ ಸಭಾಪತಿಗಳನ್ನು ಸ್ವಾಗತಿಸಿದರು.

ಹಂಗಾಮಿ ಸಭಾಪತಿಗಳನ್ನು ಭೇಟಿಯಾಗಿ ಹೊರಟ್ಟಿ ಮಂಗಳವಾರ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಬಗ್ಗೆ ತಮ್ಮ ನಿವಾಸದಲ್ಲಿ ಮಾತನಾಡಿದ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರು ಅಂಗೀಕಾರ ಮಾಡಿದ್ದಾರೆ. ಆದರೆ, ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವಾಗಿ ಕೆಲವು ನೈತಿಕ ಸಮಸ್ಯೆಗಳು ಸೃಷ್ಟಿಯಾಗಿತ್ತು. ಉಪಾಧ್ಯಕ್ಷ ಇದ್ದಿದ್ದರೆ ಸಮಸ್ಯೆ ಬರುತ್ತಿರಲಿಲ್ಲ ಎಂದರು‌.

ಇದೀಗ ರಾಜ್ಯಪಾಲರು ಹಂಗಾಮಿ ಸಭಾಪತಿ ನೇಮಕ ಮಾಡಿದ್ದು, ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾತನಾಡಿ, ಮಂಗಳವಾರ 11ಕ್ಕೆ ಸೇರ್ಪಡೆ ನಿಗದಿಯಾಗಿತ್ತು. ಆದರೆ, ಇದೀಗ ಸೇರ್ಪಡೆ ಬಗ್ಗೆ ಪಕ್ಷ ಯಾವಾಗ ತೀರ್ಮಾನ ಮಾಡುತ್ತಾರೆ ನೋಡಬೇಕು ಎಂದು ಹೇಳಿದರು.

ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ! ಮಂಗಳವಾರ ಬಿಜೆಪಿಗೆ ಸೇರ್ಪಡೆ
ಬಿಜೆಪಿ ಸೇರ್ಪಡೆ ವಿರೋಧಿಸಿ ವರಿಷ್ಠರಿಗೆ ಕೆಲವರು ಪತ್ರ ಬರೆದ ವಿಚಾರವಾಗಿ ಮಾತನಾಡಿ, ಬೇರೆಯವರ ವಿರೋಧದ ಬಗ್ಗೆ ಗೊತ್ತಿಲ್ಲ.‌‌ ಆದರೆ ಮೋಹನ್ ಲಿಂಬಿಕಾಯಿ ವಿರೋಧದ ಬಗ್ಗೆ ಗೊತ್ತು ಎಂದರು. ಆಯಾಯ ಪಕ್ಷದ ನಿಯಮಗಳ ಪ್ರಕಾರ ನಡೆದುಕೊಳ್ಳಬೇಕು. ಯಾವುದೇ ಪಕ್ಷದಲ್ಲಿ ಇದ್ದರೂ ನನ್ನ ಅಭಿಪ್ರಾಯ ಮುಕ್ತವಾಗಿ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.

ಸಭಾಪತಿ ಸ್ಥಾನಕ್ಕೆ ಮೇ 18 ರಂದು ರಾಜೀನಾಮೆ ನೀಡ್ತೇನೆ: ಹೊರಟ್ಟಿ
ಇದೇ ಸಂದರ್ಭದಲ್ಲಿ ಭಗತ್ ಸಿಂಗ್ ಪಠ್ಯವನ್ನು ಕೈಬಿಟ್ಟ ಆರ್‌ಎಸ್‌ಎಸ್ ಸ್ಥಾಪಕ ಹೆಗಡೇವಾರ್ ಭಾಷಣ ಸೇರ್ಪಡೆ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಮಾಧ್ಯಮದಲ್ಲಿ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ .ಇದು ಸೂಕ್ಷ್ಮವಾದ ವಿಚಾರ, ಈ ನಿಟ್ಟಿನಲ್ಲಿ ಪ್ರತಿಕ್ರಿಯೆ ಕೊಡಲ್ಲ. ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ