ಆ್ಯಪ್ನಗರ

ಏಪ್ರಿಲ್‌ 27 ರಂದು ರಾಹುಲ್‌ ಧರ್ಮಸ್ಥಳಕ್ಕೆ

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಏಪ್ರಿಲ್‌ 27 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

Vijaya Karnataka 23 Apr 2018, 7:59 am
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಏಪ್ರಿಲ್‌ 27 ರಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್‌ ಪರ ಪ್ರಚಾರ ನಡೆಸಲು ಏಪ್ರಿಲ್‌ 26, 27 ರಂದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Vijaya Karnataka Web rahul


ಪ್ರವಾಸದ ಮೊದಲ ದಿನ ಅಂಕೋಲ, ಕುಮಟಾ, ಭಟ್ಕಳದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಎರಡನೇ ದಿನ ಬೆಳಗ್ಗೆ ಬಂಟ್ವಾಳದಲ್ಲಿ ಸಭೆ ನಡೆಸಿ ಮಧ್ಯಾಹ್ನ 1.20 ರ ಹೊತ್ತಿಗೆ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ದರ್ಶನಕ್ಕೆ ತೆರಳಲಿದ್ದಾರೆ. ನಂತರ ಗೋಣಿಕೊಪ್ಪಲು ಹಾಗೂ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್‌ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಏಪ್ರಿಲ್‌ 27 ರಂದು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ
ಕಾಂಗ್ರೆಸ್‌ ಪ್ರಣಾಳಿಕೆ ಏಪ್ರಿಲ್‌ 27 ರಂದು ಬಿಡುಗಡೆಯಾಗಲಿದೆ. ಏಕಕಾಲದಲ್ಲಿ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರಣಾಳಿಕೆ ಬಿಡುಗಡೆಗೆ ನಿರ್ಧರಿಸಲಾಗಿದೆ. ಅದರಂತೆ ಮಂಗಳೂರಿನಲ್ಲಿ ರಾಹುಲ್‌ ಗಾಂಧಿ, ಬೆಂಗಳೂರಿನಲ್ಲಿ ಸ್ಯಾಮ್‌ ಪಿತ್ರೋಡ, ಬೆಳಗಾವಿಯಲ್ಲಿ ಶಶಿ ತರೂರ್‌ ಹಾಗೂ ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ