ಆ್ಯಪ್ನಗರ

ಮಧ್ಯಪ್ರದೇಶದಲ್ಲಿ ‘ಆಪರೇಷನ್‌ ಕಮಲ’ ಮೋದಿಯನ್ನು ತರಾಟೆಗೆ ತೆಗೆದುಕೊಂಡ ರಾಹುಲ್‌

ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Vijaya Karnataka Web 11 Mar 2020, 12:34 pm
ಬೆಂಗಳೂರು: ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡು ಕಾಂಗ್ರೆಸ್ ಸರ್ಕಾರದ ಪತನ ಬಹುತೇಕ ಖಚಿತವಾಗಿದ್ದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Vijaya Karnataka Web rahul gandhi



ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದ ರಾಹುಲ್, ನೀವು ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದೀರಿ, ಆದರೆ ಜಾಗತಿಕ ತೈಲ ಬೆಲೆಯಲ್ಲಿ 35% ಕುಸಿತವನ್ನು ನೀವು ಗಮನಿಸದೆ ಇರಬಹುದು, ಪೆಟ್ರೋಲ್‌ ಬೆಲೆಯನ್ನು ಇಳಿಕೆ ಮಾಡಲು ಸಾಧ್ಯವೇ? ಸ್ಥಗಿತಗೊಂಡ ಆರ್ಥಿಕತೆಯನ್ನು ಮೇಲೆತ್ತಲು ಸಾಧ್ಯವೇ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಂಧಿಯಾ ಅವರನ್ನು ಗೃಹ ಸಚಿವರನ್ನಾಗಿ ಮಾಡಿ ಅಥವಾ...ಕಾಂಗ್ರೆಸ್ ಒತ್ತಾಯಕ್ಕೆ ಬಿಜೆಪಿ ಸುಸ್ತು!

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪ್ರಭಾವಿ ಮುಖಂಡ ಹಾಗೂ ರಾಹುಲ್ ಗಾಂಧಿ ಆಪ್ತ ಜೋತಿರಾದಿತ್ಯ ಸಿಂಧಿಯಾ ರಾಜೀನಾಮೆಯನ್ನು ನೀಡಿದ್ದಾರೆ. ಸಿಂಧಿಯಾ ಜೊತೆಗೆ 21 ಶಾಸಕರೂ ರಾಜೀನಾಮೆಯನ್ನು ನೀಡಿದ್ದಾರೆ. ಸಿಂಧಿಯಾ ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದು ಬಹುತೇಕ ಖಚಿತವಾಗಿದೆ.

ಸಿಂಧಿಯಾ ರಾಜೀನಾಮೆಗೆ ರಾಹುಲ್ ಗಾಂಧಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಮಾಧ್ಯಮಗಳ ಪ್ರಶ್ನೆಗೂ ಇದುವರೆಗೂ ಉತ್ತರವನ್ನು ನೀಡಿಲ್ಲ. ಆದರೆ ಒಟ್ಟು ರಾಜಕೀಯ ಬಿಕ್ಕಟ್ಟು ಕುರಿತಾಗಿ ಟ್ವೀಟ್‌ ಮಾಡಿರುವ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ