ಆ್ಯಪ್ನಗರ

ಇನ್ನೂ ಎರಡು ದಿನ ಸಾಧಾರಣ ಮಳೆ, ಎಲ್ಲೆಡೆ ತಾಪ ಇಳಿಕೆ

ಬಂಗಾಳಕೊಲ್ಲಿಯಲ್ಲಿ ಉಂಟಾದ ಫೋನಿ ಚಂಡಮಾರುತ ಒಡಿಶಾ ಕಡೆ ಸಾಗುತ್ತಿರುವುದರಿಂದ ರಾಜ್ಯದಲ್ಲಿ ಅದರ ಪರಿಣಾಮ ಕಡಿಮೆಯಾಗಲಿದೆ...

Vijaya Karnataka 2 May 2019, 5:00 am
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ಫೋನಿ ಚಂಡಮಾರುತ ಒಡಿಶಾ ಕಡೆ ಸಾಗುತ್ತಿರುವುದರಿಂದ ರಾಜ್ಯದಲ್ಲಿ ಅದರ ಪರಿಣಾಮ ಕಡಿಮೆಯಾಗಲಿದೆ. ಬುಧವಾರ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸುರಿದಿದೆ. ಇನ್ನೂ ಎರಡು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Vijaya Karnataka Web rain in 2 days
ಇನ್ನೂ ಎರಡು ದಿನ ಸಾಧಾರಣ ಮಳೆ, ಎಲ್ಲೆಡೆ ತಾಪ ಇಳಿಕೆ


''ಫೋನಿ ಚಂಡಮಾರುತದ ತೀವ್ರತೆ ಕಡಿಮೆಯಾಗಲಿರುವುದರಿಂದ ಮಳೆಯ ಪ್ರಮಾಣವೂ ಕಡಿಮೆಯಾಗಲಿದೆ. ಇದೇ ವೇಳೆ ಕರಾವಳಿಯಲ್ಲಿ ದಟ್ಟ ಮೋಡಗಳ ಸಾಲು (ಟ್ರಫ್‌) ಸೃಷ್ಟಿಯಾಗಿರುವುದರಿಂದ ಆ ಭಾಗದಲ್ಲಿ ಮಳೆಯಾಗಲಿದೆ. ಜತೆಗೆ ದಕ್ಷಿಣ ಒಳನಾಡಿನಲ್ಲೂ ಸಾಧಾರಣ ಮಳೆ ಬರಲಿದೆ. ಹಿಂದಿನ ದಿನದಂತೆ ರಾಜ್ಯದಲ್ಲಿ ಹೆಚ್ಚು ಮಳೆಯಾಗುವುದಿಲ್ಲ,'' ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್‌.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ತಾಪಮಾನ ಇಳಿಕೆ

ಮಳೆಯಿಂದಾಗಿ ರಾಜ್ಯದಲ್ಲಿ ತಾಪಮಾನ ಇಳಿಕೆಯಾಗಿದೆ. ಉತ್ತರ ಒಳನಾಡಿನಲ್ಲಿ 44 ಡಿಗ್ರಿ ಸೆಲ್ಸಿಯಸ್‌ವರೆಗೆ ಗರಿಷ್ಠ ತಾಪಮಾನ ದಾಖಲಾಗಿತ್ತು. ಬುಧವಾರ ಕಲಬುರ್ಗಿಯಲ್ಲಿ 42.8 ಡಿಗ್ರಿ, ಬೀದರ್‌, ವಿಜಯಪುರ, ರಾಯಚೂರಿನಲ್ಲಿ 40 ಡಿಗ್ರಿ, ಕೊಪ್ಪಳದಲ್ಲಿ 34 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಕಂಡುಬಂದಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ 33 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ