ಆ್ಯಪ್ನಗರ

ಬೆಂಗಳೂರಲ್ಲಿ ಮಳೆ ಅಬ್ಬರ, ಮರ ಬಿದ್ದು ಬೈಕ್‌ ಸವಾರ ಸಾವು

ಬೆಂಗಳೂರಿನಲ್ಲಿ ಸಂಜೆಯೂ ಹಲವೆಡೆ ಬಿದ್ದ ಭಾರಿ ಮಳೆಯಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ.

Vijaya Karnataka Web 17 Apr 2019, 9:07 pm
ಬೆಂಗಳೂರು: ಬೇಸಿಗೆಗೆ ಬಿಸಿಗೆ ಬಸವಳಿದಿದ್ದ ರಾಜಧಾನಿ ಬೆಂಗಳೂರಿಗೆ ಮಳೆರಾಯ ಬುಧವಾರ ಸಂಜೆ ಸ್ವಲ್ಪ ತಂಪು ನೀಡಿದ್ದಾನೆ. ಆದರೆ ಲುಂಬಿನಿ ಗಾರ್ಡನ್ ಸಮೀಪ ಮರವೊಂದು ಉರುಳಿ ಬಿದ್ದ ಪರಿಣಾಮ ಬೈಕ್‌ ಸವಾರ ಮೃತಪಟ್ಟಿದ್ದಾನೆ.
Vijaya Karnataka Web ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಪರಿಶೀಲನೆ ನಡೆಸುತ್ತಿರುವ ಪೊಲೀಸರು


ಕೊರಿಯರ್‌ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ (28) ಮೃತ ವ್ಯಕ್ತಿ.

ಚುನಾವಣೆಗೆ ಮುನ್ನಾ ದಿನ ಬುಧವಾರ ಸಂಜೆ ಬೆಂಗಳೂರಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

ನಾಗರಿಕರು, ವಾಹನ ಸವಾರರು ಮಳೆಯಿಂದ ತೊಂದರೆಗೀಡಾದರು.

ಬೆಂಗಳೂರಿನಲ್ಲಿ ಸಂಜೆಯೂ ಹಲವೆಡೆ ಬಿದ್ದ ಭಾರಿ ಮಳೆಯಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ.

ಮಲ್ಲೇಶ್ವರದಲ್ಲಿ ಮಳೆ, ಗಾಳಿಯಿಂದ ಜನರು ಪುಳಕಿತರಾದರು.

ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಎಂಜಿ ರಸ್ತೆ, ಮಲ್ಲೇಶ್ವರ, ರಾಜಾಜಿನಗರ, ಶ್ರೀನಿವಾಸನಗರ, ಹನುಮಂತನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

ಮೆಜೆಸ್ಟಿಕ್‌, ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿ ವಾಹನ ಸಂಚಾರಕ್ಕೆ ಧಕ್ಕೆಯಾಗಿದೆ.

ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿರುವ ವರದಿಯಾಗಿದೆ.

ಮೊದಲ ಮಳೆಗೆ ಎರಡು ಮಂದಿ ಬಲಿ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಗಾಳಿ ಮಳೆಗೆ ತೋಟದ ಮನೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಭಾಗ್ಯಮ್ಮ(45), ವೆಂಕಿ (10) ಎಂದು ಗುರುತಿಸಲಾಗಿದೆ.

ಮೃತ ವೆಂಕಿಯ ತಾಯಿ ಮುನಿರತ್ನಮ್ಮ ಹಾಗೂ ಪಕ್ಕದ ಹೊಲದ ಮಾಲೀಕ ಶ್ರೀನಿವಾಸ್ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲು ಮಾಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ