ಬೆಂಗಳೂರು: ತೀವ್ರ ವಿಳಂಬವಾಗಿದ್ದ ಮುಂಗಾರು ಮಳೆ ಈಗ ಕೊನೆಗೂ ಕಾಲಿಟ್ಟಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆರಾಯ ಶುಕ್ರವಾರ ಸಂಜೆ ಅಬ್ಬರಿಸಿದ್ದಾನೆ.
ಮಧ್ಯಾಹ್ನದಿಂದಲೇ ಹಲವಾರು ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು ನಾಗರಿಕರು, ವಾಹನ ಸವಾರರು ಮಳೆಯಿಂದ ತೊಂದರೆಗೀಡಾದರು.
ಬೆಂಗಳೂರಿನಲ್ಲಿ ರಾತ್ರಿ ಕೂಡ ಭಾರಿ ಮಳೆಯಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ. ಕಚೇರಿಗಳಿಂದ ಮನೆಗಳಿಗೆ ತೆರಳುತ್ತಿದ್ದವರು ಭಾರಿ ತೊಂದರೆಗೀಡಾದರು.
ಎಂಜಿ ರಸ್ತೆ, ಶ್ರೀನಿವಾಸನಗರ, ಹನುಮತನಗರ, ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಮಲ್ಲೇಶ್ವರ, ರಾಜಾಜಿನಗರ, ಶ್ರೀನಿವಾಸನಗರ, ಹನುಮಂತನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.
ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿ ವಾಹನ ಸಂಚಾರಕ್ಕೆ ಧಕ್ಕೆಯಾಗಿದೆ.
ರಾಜ್ಯದ ಇತರೆಡೆಗಳಲ್ಲಿಯೂ ಭಾರಿ ಮಳೆಯಾಗಿರುವ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೂಡಿಗೆರೆ ಸುತ್ತಮುತ್ತ ಭಾರೀ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆಯಾಗಿದೆ. ಶುಕ್ರವಾರ ಸುರಿದ ಮಳೆಯಿಂದ ಹೇಮಾವತಿ ನದಿ ಉಕ್ಕಿ ಹರಿದು ಗದ್ದೆ ಜಲಾವೃತ್ತಗೊಂಡಿತ್ತು. ಮುಂಜ್ರಾಗತ ಕ್ರಮವಾಗಿ ಮೂಡಿಗೆರೆ ತಹಶೀಲ್ದಾರ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮಧ್ಯಾಹ್ನದಿಂದಲೇ ಹಲವಾರು ಕಡೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು ನಾಗರಿಕರು, ವಾಹನ ಸವಾರರು ಮಳೆಯಿಂದ ತೊಂದರೆಗೀಡಾದರು.
ಬೆಂಗಳೂರಿನಲ್ಲಿ ರಾತ್ರಿ ಕೂಡ ಭಾರಿ ಮಳೆಯಿಂದಾಗಿ ವಾಹನ ಸಂಚಾರ ವ್ಯತ್ಯಯವಾಗಿದೆ. ಕಚೇರಿಗಳಿಂದ ಮನೆಗಳಿಗೆ ತೆರಳುತ್ತಿದ್ದವರು ಭಾರಿ ತೊಂದರೆಗೀಡಾದರು.
ಎಂಜಿ ರಸ್ತೆ, ಶ್ರೀನಿವಾಸನಗರ, ಹನುಮತನಗರ, ವಿಧಾನಸೌಧ, ಶಾಂತಿ ನಗರ, ಆಡುಗೋಡಿ, ಮಲ್ಲೇಶ್ವರ, ರಾಜಾಜಿನಗರ, ಶ್ರೀನಿವಾಸನಗರ, ಹನುಮಂತನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.
ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಯಶವಂತಪುರ, ಹನುಮಂತನಗರ, ವಿದ್ಯಾರಣ್ಯಪುರದಲ್ಲಿ ವಾಹನ ಸಂಚಾರಕ್ಕೆ ಧಕ್ಕೆಯಾಗಿದೆ.
ರಾಜ್ಯದ ಇತರೆಡೆಗಳಲ್ಲಿಯೂ ಭಾರಿ ಮಳೆಯಾಗಿರುವ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೂಡಿಗೆರೆ ಸುತ್ತಮುತ್ತ ಭಾರೀ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆಯಾಗಿದೆ. ಶುಕ್ರವಾರ ಸುರಿದ ಮಳೆಯಿಂದ ಹೇಮಾವತಿ ನದಿ ಉಕ್ಕಿ ಹರಿದು ಗದ್ದೆ ಜಲಾವೃತ್ತಗೊಂಡಿತ್ತು. ಮುಂಜ್ರಾಗತ ಕ್ರಮವಾಗಿ ಮೂಡಿಗೆರೆ ತಹಶೀಲ್ದಾರ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.