ಆ್ಯಪ್ನಗರ

ಮೇಲ್ಮೈ ಸುಳಿಗಾಳಿ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ

ದಕ್ಷಿಣ ಒಳನಾಡಿನಲ್ಲಿ ಕಂಡುಬಂದ 'ಟ್ರಫ್‌' (ದಟ್ಟ ಮೋಡಗಳ ಸಾಲು) ಪರಿಣಾಮವಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ.

Vijaya Karnataka 31 Mar 2018, 5:30 am
ಬೆಂಗಳೂರು : ದಕ್ಷಿಣ ಒಳನಾಡಿನಲ್ಲಿ ಕಂಡುಬಂದ 'ಟ್ರಫ್‌' (ದಟ್ಟ ಮೋಡಗಳ ಸಾಲು) ಪರಿಣಾಮವಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ.
Vijaya Karnataka Web rain in karnataka
ಮೇಲ್ಮೈ ಸುಳಿಗಾಳಿ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ


ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿದಿದೆ. ಆಲಿಕಲ್ಲು ಮಳೆಯಿಂದಾಗಿ ಹಲವು ಕಡೆ ಮಾವು, ದ್ರಾಕ್ಷಿ ಸೇರಿದಂತೆ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ, ದಕ್ಷಿಣ ಮಧ್ಯ ಮಹಾರಾಷ್ಟ್ರದಿಂದ ಶ್ರೀಲಂಕಾ ಹಾಗೂ ಭಾರತದ ನಡುವಿನ ಪ್ರದೇಶಕ್ಕೆ ದಕ್ಷಿಣ ಒಳನಾಡಿನ ಮೂಲಕ ಮೋಡಗಳ ಸಾಲು ಹಾದುಹೋಗಿದೆ. ಇದರ ಪರಿಣಾಮವಾಗಿ ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿದಿದೆ. ಹಾಸನದ ಭೈರಾಪುರದಲ್ಲಿ 24 ಮಿ.ಮೀ, ನೆಲಮಂಗಲದಲ್ಲಿ 3 ಮಿ.ಮೀ, ಮಂಡ್ಯದ ಬ್ರಹ್ಮದೇವರಹಳ್ಳಿಯಲ್ಲಿ 38.9 ಮಿ.ಮೀ, ಮನಹಳ್ಳಿಯಲ್ಲಿ 34 ಮಿ.ಮೀ, ಮುತ್ತಿಗೆರೆಯಲ್ಲಿ 20 ಮಿ.ಮೀ, ದೊಡ್ಡಬಳ್ಳಾಪುರದಲ್ಲಿ 21 ಮಿ.ಮೀ, ವಿರಾಜಪೇಟೆಯಲ್ಲಿ 19 ಮಿ.ಮೀ, ತುಮಕೂರಿನಲ್ಲಿ 11.9 ಮಿ.ಮೀ ಮಳೆಯಾಗಿದೆ. ಮೈಸೂರು, ರಾಮನಗರ, ಕೋಲಾರ, ಚಿಕ್ಕಮಗಳೂರು, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಬಿದ್ದಿದೆ.

ತಾಪಮಾನ ಯಥಾಸ್ಥಿತಿ


ಮಳೆ ಸುರಿದಿದ್ದರೂ ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ.

ದಕ್ಷಿಣ ಒಳನಾಡು 27ರಿಂದ 36 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಒಳನಾಡಿನ ಕಲಬುರ್ಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಕಳೆದ ವರ್ಷ ಈ ಜಿಲ್ಲೆಯಲ್ಲಿ ಮಾರ್ಚ್‌ನಲ್ಲಿ 42.6 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಅದೇ ದಾಖಲೆ ಪ್ರಮಾಣದ ತಾಪಮಾನ. ಅದಕ್ಕಿಂತ ಹಿಂದೆ 2008ರವರೆಗೂ 42 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿರಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ