ಆ್ಯಪ್ನಗರ

Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ನಿನ್ನೆ ರಾತ್ರಿಯಿಂದ ಮಳೆಯಾಗುತ್ತಿದೆ.

Vijaya Karnataka Web 24 Sep 2018, 11:12 am
ಬೆಂಗಳೂರು: ನಗರ ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ನಿನ್ನೆ ರಾತ್ರಿಯಿಂದ ಮಳೆಯಾಗಿದೆ. ತುಮಕೂರಿನಲ್ಲೂ ರಾತ್ರಿ ಎರಡು ಗಂಟೆಯಿಂದ ಭಾರಿ ಮಳೆಯಾಗುತ್ತಿದೆ .ಕಳೆದ ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಭಾನುವಾರ ರಾತ್ರಿ ಮತ್ತೆ ಆರಂಭಗೊಂಡಿದ್ದು, ಸೋಮವಾರ ಬೆಳಗ್ಗೆಯೂ ಮುಂದುವರಿದಿದೆ.
Vijaya Karnataka Web 1




ಮಂಡ್ಯದಲ್ಲಿ ಗುಡುಗು, ಸಿಡಿಲು ಸಹಿತ ರಾತ್ರಿಯಿಡೀ ಸುರಿದ ಮಳೆ ಇನ್ನೂ ನಿಂತಿಲ್ಲ. ಕೊಡಗು ಜಿಲ್ಲೆಯಲ್ಲಿ ಮುಂಜಾನೆಯಿಂದ ಸಾಧಾರಣ ಮಳೆಯಾಗುತ್ತಿದೆ. ಮಡಿಕೇರಿ, ಮೂರ್ನಾಡು, ವಿರಾಜಪೇಟೆ, ಗೋಣಿಕೊಪ್ಪ, ಸಿದ್ದಾಪುರಗಳಲ್ಲಿ ಮಳೆ ಜಿನುಗುತ್ತಿದೆ.

ಹಾಸನ ಜಿಲ್ಲೆಯಲ್ಲೂ ಮುಂಜಾನೆಯಿಂದ ಪ್ರಾರಂಭವಾಗಿದೆ. ಶಾಲೆ,ಕಾಲೇಜು ವಿದ್ಯಾರ್ಥಿಗಳು, ನೌಕರರು ಪರದಾಡುತಾಗಿದೆ.

ಶಿರಸಿಯಲ್ಲಿ ಬಿರು ಬಿಸಿಲು ವಾತಾವರಣವಿದ್ದು, ಕಳೆದ 15 ದಿನಗಳಿಂದ ಹನಿ ಮಳೆಯೂ ಇಲ್ಲ. ಗಾಳಿಯೂ ಇಲ್ಲದೇ ಬಿಸಿಲು ವಿಪರೀತವಾಗಿದ್ದು ಜನ ಹೈರಾಣಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ