ಆ್ಯಪ್ನಗರ

ಎನ್‌ಪಿಎಸ್‌ ರದ್ದತಿಗೆ ಆಗ್ರಹಿಸಿ ದಿಲ್ಲಿಯಲ್ಲಿ ರ್‍ಯಾಲಿ

ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್‌ಪಿಎಸ್‌) ರದ್ದಪಡಿಸಲು ಒತ್ತಾಯಿಸಿ ದೇಶದ ಎಲ್ಲಾ ರಾಜ್ಯಗಳ ಸರಕಾರಿ ನೌಕರರ ಒಕ್ಕೂಟವು ದಿಲ್ಲಿಯಲ್ಲಿ ಸೆ.5ಕ್ಕೆ ರ್‍ಯಾಲಿ ಹಮ್ಮಿಕೊಂಡಿದೆ.

Vijaya Karnataka Web 4 Sep 2018, 4:00 am
ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್‌ಪಿಎಸ್‌) ರದ್ದಪಡಿಸಲು ಒತ್ತಾಯಿಸಿ ದೇಶದ ಎಲ್ಲಾ ರಾಜ್ಯಗಳ ಸರಕಾರಿ ನೌಕರರ ಒಕ್ಕೂಟವು ದಿಲ್ಲಿಯಲ್ಲಿ ಸೆ.5ಕ್ಕೆ ರ್‍ಯಾಲಿ ಹಮ್ಮಿಕೊಂಡಿದೆ.
Vijaya Karnataka Web rally in delhi demanding nps cancellation
ಎನ್‌ಪಿಎಸ್‌ ರದ್ದತಿಗೆ ಆಗ್ರಹಿಸಿ ದಿಲ್ಲಿಯಲ್ಲಿ ರ್‍ಯಾಲಿ


ಅಂದು ಇಡೀ ದಿನ ಕರ್ನಾಟಕ ಸಹಿತ ನಾನಾ ರಾಜ್ಯಗಳ ಸಾವಿರಾರು ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಎನ್‌ಪಿಎಸ್‌ ರದ್ದತಿ ಹಾಗೂ ಸರಕಾರದ ನಾನಾ ಇಲಾಖೆಗಳಲ್ಲಿನ ಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಒತ್ತಾಯಿಸಲು ರ್‍ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

''ಎನ್‌ಪಿಎಸ್‌ ನೌಕರರ ಹಿತಾಸಕ್ತಿಯನ್ನು ರಕ್ಷಿಸುತ್ತಿಲ್ಲ. ಬದಲಾಗಿ ನೌಕರರಿಂದ ಸಂಗ್ರಹಿಸಿದ ವಂತಿಗೆ ಹಣವನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸುವುದರಿಂದ ನಿಖರ ಆದಾಯ ಬರುವ ಸಾಧ್ಯತೆ ಇಲ್ಲ. ಹೀಗಾಗಿ ಎನ್‌ಪಿಎಸ್‌ ಬದಲು ಹಿಂದಿನ ನಿಶ್ಚಿತ ಪಿಂಚಣಿ ಯೋಜನೆಯನ್ನೇ ಪುನರ್‌ ಜಾರಿ ಮಾಡಬೇಕಿದೆ,'' ಎಂದು ರಾಜ್ಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜೈಕುಮಾರ್‌ ಎಚ್‌ ಎಸ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ