ಆ್ಯಪ್ನಗರ

ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನಕ್ಕೆ ಮನವಿ

ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ವಿಸ್ತರಣೆಯಲ್ಲಿ ಪಕ್ಷದ ನಿಷ್ಠಾವಂತ ಹಾಗೂ ಹಿರಿಯ ನಾಯಕರೂ ಆಗಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ...

Vijaya Karnataka 7 Jun 2019, 5:00 am
ಬೆಂಗಳೂರು: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ವಿಸ್ತರಣೆಯಲ್ಲಿ ಪಕ್ಷದ ನಿಷ್ಠಾವಂತ ಹಾಗೂ ಹಿರಿಯ ನಾಯಕರೂ ಆಗಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ಕಲ್ಪಿಸಬೇಕೆಂದು ಪಕ್ಷದ ಕಾರ್ಯಕರ್ತರ ನಿಯೋಗವೊಂದು ಕೆಪಿಸಿಸಿ ಕಾರ್ಯಾಧ್ಯಕ್ಷರಿಗೆ ಮನವಿ ಸಲ್ಲಿಸಿದೆ.
Vijaya Karnataka Web congress-ramalinga reddy


ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಕವಿಕ ಮಾಜಿ ಅಧ್ಯಕ್ಷ ಮನೋಹರ್‌, ಎಂ.ಎ.ಸಲೀಂ, ಗೋವರ್ಧನ್‌ ರೆಡ್ಡಿ, ಗೋವಿಂದ ರಾಜು ಹಾಗೂ ಶಶಿಕುಮಾರ್‌ ನೇತೃತ್ವದ ನಿಯೋಗವು, ''ರಾಮಲಿಂಗಾರೆಡ್ಡಿ ಅವರು ಕಾಂಗ್ರೆಸ್‌ ಪಕ್ಷದ ಶಿಸ್ತಿನ ಸಿಪಾಯಿ ಮಾತ್ರವಲ್ಲ ಕಾರ್ಯಕರ್ತರ ಬೆನ್ನೆಲುಬಾಗಿ ನಿಂತು ಪಕ್ಷದ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ 7 ಸಲ ಸತತವಾಗಿ ಶಾಸಕರಾಗಿ ಆಯ್ಕೆಯಾಗಿ ವಿವಿಧ ಸರಕಾರದಗಳ ಅವಧಿಯಲ್ಲಿ ಸಚಿವ ಸ್ಥಾನ ದೊರೆತ ಸಂದರ್ಭದಲ್ಲಿ ಪಕ್ಷ ಹಾಗೂ ಸರಕಾರಕ್ಕೆ ಗೌರವ ತರುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ,''ಎಂದು ಹೇಳಿದ್ದಾರೆ.

''ಯಾವತ್ತೂ ಯಾವುದೇ ರೀತಿಯ ಹಗರಣ, ವಿವಾದಕ್ಕೆ ಗುರಿಯಾಗದೆ ಪ್ರಾಮಾಣಿಕ ಹಾಗೂ ಪಾರದರ್ಶಕ ಆಡಳಿತ ನೀಡಿ ತಮ್ಮದೇ ಗೌರವ ಸಂಪಾದನೆ ಮಾಡಿದ್ದಾರೆ. ಇಂಥ ಹಿರಿಯ ನಾಯಕರಿಗೆ ಈಗಿನ ಮೈತ್ರಿ ಸರಕಾರದಲ್ಲಿ ಅವಕಾಶ ಕಲ್ಪಿಸದೇ ಹೊರಗಿಟ್ಟಿರುವುದು ಕಾರ್ಯಕರ್ತರಿಗೆ ಮಾಡಿದ ಅವಮಾನ. ಹೀಗಾಗಿ ಅವರನ್ನು ತಕ್ಷಣವೇ ಸಂಪುಟಕ್ಕೆ ಸೇರಿಸಿಕೊಳ್ಳಬೇಕು,''ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ