ಆ್ಯಪ್ನಗರ

ರಾಜೀನಾಮೆ ಹಿಂಪಡೆಯಲು ರಾಮಲಿಂಗಾರೆಡ್ಡಿ ನಿರ್ಧಾರ?

ಕರ್ನಾಟಕ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ರಾಜೀನಾಮೆ ನೀಡಿದ್ದ ಬಿಟಿಎಂ ಲೇಔಟ್‌ ಶಾಸಕ ರಾಮಲಿಂಗಾರೆಡ್ಡಿ ಈಗ ತಮ್ಮ ನಿರ್ಧಾರ ಬದಲಿಸಿದ್ದಾರೆ. ರಾಜೀನಾಮೆ ಹಿಂಪಡೆಯಲು ಮುಂದಾಗಿದ್ದಾರೆ.

Vijaya Karnataka Web 17 Jul 2019, 9:24 pm
ಬೆಂಗಳೂರು: ಬಂಡಾಯದ ಬಾವುಟ ಹಾರಿಸಿ ರಾಜೀನಾಮೆ ನೀಡಿ ದೋಸ್ತಿ ಸರಕಾರಕ್ಕೆ ಸಂಕಷ್ಟ ತಂದೊಡ್ಡಿದ್ದ ಬಿಟಿಎಂ ಲೇಔಟ್‌ ಶಾಸಕ ರಾಮಲಿಂಗಾರೆಡ್ಡಿ ಈಗ ರಾಜೀನಾಮೆ ವಾಪಸ್‌ ಪಡೆದು ಕಾಂಗ್ರೆಸ್‌ ಪಕ್ಷದಲ್ಲಿಯೇ ಮುಂದುವರಿಯಲು ನಿರ್ಧರಿಸಿದ್ದಾರೆ.
Vijaya Karnataka Web ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ


ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರ ಒತ್ತಡದ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಮಲಿಂಗಾರೆಡ್ಡಿ, ಕಳೆದ ನಾಲ್ಕೂವರೆ ದಶಕಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಏಳು ಬಾರಿ ಶಾಸಕರನಾಗಿ ಮತ ಕ್ಷೇತ್ರದ ಏಳಿಗೆಗೆ ಶ್ರಮಿಸಿದ್ದೇನೆ ಎಂದರು.

ಕಾಂಗ್ರೆಸ್‌ನ ಹಿರಿಯ ನಾಯಕರು, ಕಾರ್ಯಕರ್ತರು ಒತ್ತಡ ಹೇರಿ ರಾಜೀನಾಮೆ ವಾಪಸ್‌ ಪಡೆದು ಪಕ್ಷದಲ್ಲಿಯೇ ಮುಂದುವರಿಯುವಂತೆ ಕೋರಿದ್ದಾರೆ. ರಾಜ್ಯದ ಉದ್ದಗಲಕ್ಕೂ ಕಾಂಗ್ರೆಸ್‌ ಕಾರ್ಯಕರ್ತರು ರಾಜೀನಾಮೆ ವಾಪಸ್‌ ಪಡೆಯುಲು ಮನವಿ ಮಾಡಿಕೊಂಡಿದ್ದಾರೆ ಎಂದರು.

ಈ ಎಲ್ಲ ಬೆಳವಣಿಗೆಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿಯೇ ಮುಂದುವರಿಯಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸಭಾ ಸ್ಪೀಕರ್‌ಗೆ ಕರೆ ಮಾಡಿ ರಾಜೀನಾಮೆ ಹಿಂಪಡೆಯುತ್ತಿರುವುದಾಗಿ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ