ಆ್ಯಪ್ನಗರ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ರಾ ಯುವತಿ?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಸಂತ್ರಸ್ತೆ ಯುವತಿ ಎಸ್‌ಐಟಿ ಮುಂದೆ ತಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ವಿರುದ್ಧವಾದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಇದನ್ನು ಯಾರೂ ದೃಢಪಡಿಸಿಲ್ಲ.

Vijaya Karnataka Web 12 Apr 2021, 3:21 pm

ಹೈಲೈಟ್ಸ್‌:

  • ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ
  • ಎಸ್‌ಐಟಿ ಮುಂದೆ ಉಲ್ಟಾ ಹೊಡೆದ ಯುವತಿ
  • ಇದೆಲ್ಲಾ ಸುಳ್ಳು ಎಂದ ಯುವತಿ ಪರ ವಕೀಲರು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web CD Lady
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಸಂತ್ರಸ್ತೆ ಯುವತಿ ಇದೀಗ ಎಸ್‌ಐಟಿ ಮುಂದೆ ತಾನು ಈ ಹಿಂದೆ ಕೊಟ್ಟಿದ್ದ ಹೇಳಿಕೆಗೆ ವಿರುದ್ಧವಾದ ಹೇಳಿಕೆಯನ್ನು ನೀಡಿದ್ದಾರೆ ಎಂದು ಸುದ್ದಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಸಂತ್ರಸ್ತೆ ಯುವತಿ ಸೋಮವಾರ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಅವರಿಗೆ ನೋಟಿಸ್‌ ನೀಡದಿದ್ದರೂ ವಿಚಾರಣೆಗೆ ಹಾಜರಾಗಿದ್ದು ತಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ವಿರದ್ಧವಾಗಿ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗಿತ್ತು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆಲಸ ನೀಡುವುದಾಗಿ ವಂಚಿಸಿ ನನ್ನನ್ನು ಬಳಕೆ ಮಾಡಿಕೊಂಡಿದ್ದಾರೆ ಎಂಬ ಹೇಳಿಕೆಯನ್ನು ಯುವತಿ ನೀಡಿದ್ದರು. ನ್ಯಾಯಾಲಯದ ಮುಂದೆ 164 ಹೇಳಿಕೆಯನ್ನು ನೀಡಿದ ಬಳಿಕ ಎಸ್‌ಐಟಿ ಮುಂದೆಯೂ ಹಾಜರಾಗಿ ತನ್ನ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದರು.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಸ್‌ಐಟಿ ಮುಂದೆ ಸಂತ್ರಸ್ತೆ ಉಲ್ಟಾ ಹೊಡೆದಿಲ್ಲ, ಯುವತಿ ಪರ ವಕೀಲರ ಸ್ಪಷ್ಟನೆ

ಆದರೆ ಇದೀಗ ದಿಢೀರಾಗಿ ಉಲ್ಟಾ ಹೊಡೆದಿದ್ದಾರೆ. ನನ್ನನ್ನು ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ ಸಿ.ಡಿ ಪ್ರಕರಣದ ಕಿಂಗ್‌ಪಿನ್‌ಗಳೆಂದು ಹೇಳಲಾಗುತ್ತಿರುವ ಶ್ರವಣ್ ಹಾಗೂ ನರೇಶ್ ವಿರುದ್ಧನೂ ಯುವತಿ ಆರೋಪ ಮಾಡಿದ್ದಾರೆ ಎಂಬ ಸುದ್ದಿಗಳು ಎಲ್ಲೆಡೆ ಹರದಾಡುತ್ತಿವೆ. ಆದರೆ ಈ ಸುದ್ದಿಯನ್ನು ಯುವತಿ ಪರ ವಕೀಲರು ನಿರಾಕರಣೆ ಮಾಡಿದ್ದಾರೆ. ಯುವತಿ ಯಾವುದೇ ತನ್ನ ನಿಲುವಿಗೆ ವಿರುದ್ಧವಾಗಿರುವ ಹೇಳಿಕೆಯನ್ನು ನೀಡಿಲ್ಲ ಎಂದಿದ್ದಾರೆ.

ಹಾಗಿದ್ದರೂ ಈ ಸುದ್ದಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಒಂದು ವೇಳೆ ಯುವತಿ ಉಲ್ಟಾ ಹೇಳಿಕೆ ನೀಡದೆ ಇದ್ದರೂ ಯಾರು ಈ ಸುದ್ದಿಯನ್ನು ಹರಿಯಬಿಟ್ಟರು ಎಂಬುವುದು ಕುತೂಹಲಕ್ಕೆ ಕಾರಣವಾಗಿದೆ.

ಮಾಜಿ ಸಚಿವ ರಮೇಶ್ ಜಾರಿಹೊಳಿ ವಿರುದ್ಧ ಯುವತಿ ಗಂಭೀರ ಆರೋಪ ಮಾಡಿದ್ದು ಸದ್ಯ ಪೊಲೀಸರ ಭದ್ರತೆಯಲ್ಲಿ ಯುವತಿ ಇದ್ದಾರೆ. ಈಗಾಗಲೇ ಎಸ್‌ಐಟಿ ಒಂದು ಬಾರಿ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಿದೆ. ಆದರೆ ಇದೀಗ ಕೋವಿಡ್‌ ಕಾರಣ ನೀಡಿ ರಮೇಶ್ ಜಾರಕಿಹೊಳಿ ವಿಚಾರಣೆಗೆ ಗೈರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ