ಆ್ಯಪ್ನಗರ

ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿ.ಡಿ ವಿವಾದ; ಯುವತಿ ಬಂಧನ ತಡೆಗೆ ಹೈಕೋರ್ಟ್‌ ನಕಾರ

ರಮೇಶ್‌ ಜಾರಕಿಹೊಳಿ ದಾಖಲಿಸಿರುವ ದೂರು ರದ್ದು ಕೋರಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 482 ಅಡಿ ಸಲ್ಲಿಸಿದ ಅರ್ಜಿ ಇದಾಗಿದೆ. ಹಾಗಾಗಿ, ಅರ್ಜಿದಾರಳನ್ನು ಬಂಧಿಸದಂತೆ ಇದರಲ್ಲಿ ಸೂಚಿಸಲಾಗದು. ಅಗತ್ಯವಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ.

Vijaya Karnataka 24 Jun 2021, 7:37 am

ಹೈಲೈಟ್ಸ್‌:

  • ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅಶ್ಲೀಲ ಸಿ.ಡಿ ವಿವಾದ
  • ಸಂತ್ರಸ್ತ ಯುವತಿ ಬಂಧನ ತಡೆಗೆ ಹೈಕೋರ್ಟ್‌ ನಕಾರ
  • ಅಗತ್ಯವಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು
  • ಸಂತ್ರಸ್ತ ಯುವತಿ ಪರ ವಕೀಲರಿಗೆ ಹೈಕೋರ್ಟ್ ಸೂಚನೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Karnataka High Court
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ ಬಹಿರಂಗ ಪ್ರಕರಣದಲ್ಲಿ ತನ್ನನ್ನು ಬಂಧಿಸದಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂಬ ಸಂತ್ರಸ್ತೆಯ ಮನವಿಯನ್ನು ಹೈಕೋರ್ಟ್‌ ಪುರಸ್ಕರಿಸಿಲ್ಲ.
ರಮೇಶ್‌ ಜಾರಕಿಹೊಳಿ ಅವರು ಸದಾಶಿವನಗರ ಠಾಣೆಯಲ್ಲಿ ದಾಖಲಿಸಿರುವ ದೂರನ್ನು ರದ್ದು ಮಾಡುವಂತೆ ಯುವತಿ ಸಲ್ಲಿಸಿದ್ದ ಅರ್ಜಿ, ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕ ಸದಸ್ಯಪೀಠದ ಮುಂದೆ ವಿಚಾರಣೆಗೆ ಬಂತು. ಯುವತಿ ಪರ ವಾದಿಸಿದ ವಕೀಲ ಸಂಕೇತ್‌ ಏಣಗಿ, ‘ಅತ್ಯಾಚಾರ ಆರೋಪ ಸಂಬಂಧ ಆರೋಪಿ ರಮೇಶ್‌ ಜಾರಕಿಹೊಳಿಯನ್ನು ತನಿಖಾಧಿಕಾರಿಗಳು ಬಂಧಿಸಿಲ್ಲ. ಆದರೆ, ಅದರ ಬದಲಿಗೆ ದೂರು ನೀಡಿರುವ ಯುವತಿಯನ್ನೇ ಬಂಧಿಸುವ ಸಾಧ್ಯತೆ ಇದೆ. ಇದರಿಂದ ಆಕೆಗೆ ಬಂಧನ ಭೀತಿ ಇದೆ. ಆಕೆಯನ್ನು ಬಂಧಿಸದಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿದರು.
ಉಲ್ಟಾ ಹೊಡೆದಿಲ್ಲ, ಪತ್ರ ಬರೆದಿಲ್ಲ: ಸಿ.ಡಿ. ಪ್ರಕರಣದ ಯುವತಿ ಸ್ಪಷ್ಟನೆ
ಅದಕ್ಕೆ ನ್ಯಾಯಪೀಠ, ‘ರಮೇಶ್‌ ಜಾರಕಿಹೊಳಿ ದಾಖಲಿಸಿರುವ ದೂರು ರದ್ದು ಕೋರಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 482 ಅಡಿ ಸಲ್ಲಿಸಿದ ಅರ್ಜಿ ಇದಾಗಿದೆ. ಹಾಗಾಗಿ, ಅರ್ಜಿದಾರಳನ್ನು ಬಂಧಿಸದಂತೆ ಇದರಲ್ಲಿ ಸೂಚಿಸಲಾಗದು. ಅಗತ್ಯವಿದ್ದರೆ ನಿರೀಕ್ಷಣಾ ಜಾಮೀನು ಕೋರಿ ಪ್ರತ್ಯೇಕ ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿತು. ಎಸ್‌ಐಟಿ ಪರ ವಾದಿಸಿದ ಎಸ್‌ಪಿಪಿ ಪಿ.ಪ್ರಸನ್ನಕುಮಾರ್‌, ‘ಪ್ರಕರಣ ಸಂಬಂಧ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಪಿಐಎಲ್‌ಗಳ ವಿಚಾರಣೆ ಇದೆ. ವಿಭಾಗೀಯಪೀಠ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದೆ. ಹಾಗಾಗಿ ಈ ಅರ್ಜಿಯ ವಿಚಾರಣೆ ಮುಂದೂಡಬೇಕು’ ಎಂದು ಮನವಿ ಮಾಡಿದರು.
ಪ್ರಕರಣ ಕೈ ಬಿಡಲು ಕೋಟ್ಯಂತರ ರೂ. ಅಮಿಷ: ರಮೇಶ್‌ ಜಾರಕಿಹೊಳಿ ವಿರುದ್ಧ ಮತ್ತೆ ಸಿಡಿದೆದ್ದ ಸಿ.ಡಿ ಯುವತಿ!
ಆ ಮನವಿ ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಜು.6ಕ್ಕೆ ಮುಂದೂಡಿತು. ಮತ್ತೊಂದೆಡೆ ಸಿ.ಡಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ನಗರ ಪೊಲೀಸ್‌ ಆಯುಕ್ತರ ಆದೇಶ ರದ್ದು ಕೋರಿ ಸಲ್ಲಿಸಲಾಗಿದ್ದ ಪ್ರತ್ಯೇಕ ಪಿಐಎಲ್‌ಗಳ ವಿಚಾರಣೆ ಸಮಯದ ಅಭಾವದಿಂದ ಜೂ.25ಕ್ಕೆ ಮುಂದೂಡಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ