ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ನವೆಂಬರ್ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಚುನಾವಣಾ ಆಯೋಗ ಬುಧವಾರ ಸ್ಪಷ್ಟಪಡಿಸಿದೆ. ಆದರೆ ಸರಕಾರ, ತನ್ನ ನಿಲುವು ವ್ಯಕ್ತಪಡಿಸಲು ಕಾಲಾವಕಾಶ ಕೋರಿದೆ.
ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರಕಾರಿ ವಕೀಲರು, "ಚುನಾವಣೆ ನಡೆಸುವ ವಿಚಾರವಾಗಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರಕರಣದ ಸಂಬಂಧ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು'' ಎಂದು ಕೋರಿದರು.
ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ ಕೋರಿ ಆಯೋಗಕ್ಕೆ ಪತ್ರ ಬರೆದ ಸರಕಾರ
ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, "ಆಯೋಗ ಸಹ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದೆ. ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಬಹುದು ಎಂಬ ನಿಲುವು ತಿಳಿಸಿದ್ದಾರೆ'' ಎಂದು ಮಾಹಿತಿ ನೀಡಿದರು.
ಅದಕ್ಕೆ ನ್ಯಾಯಪೀಠ, ''ಕೊರೊನಾ ಸೋಂಕು ಕಡಿಮೆ ಇರುವ ಪ್ರದೇಶಗಳಲ್ಲಿ ಸದ್ಯ ಚುನಾವಣೆ ನಡೆಸಬಹುದಲ್ಲವೇ? ಪ್ರತ್ಯೇಕ ಹಂತದಲ್ಲಿ ಚುನಾವಣೆ ನಡೆಸಲು ಚಿಂತನೆ ಮಾಡಬಹುದಲ್ಲವೇ?'' ಎಂದು ಸರಕಾರಿ ವಕೀಲರನ್ನು ಪ್ರಶ್ನಿಸಿತು.
ಗ್ರಾಮ ಪಂಚಾಯಿತಿ ಎಲೆಕ್ಷನ್ ಮುಂದೂಡಿಕೆ ಅಸಾಧ್ಯ: ಚುನಾವಣಾ ಆಯೋಗ
ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ
ಆಯೋಗದ ವಕೀಲರು, "ಅದೇ ನಿಟ್ಟಿನಲ್ಲಿ ಆಯೋಗ ಕೂಡ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ," ಎಂದು ವಿವರಿಸಿದರು.
ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಸರಕಾರಿ ವಕೀಲರು, "ಚುನಾವಣೆ ನಡೆಸುವ ವಿಚಾರವಾಗಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಪ್ರಕರಣದ ಸಂಬಂಧ ಅಡ್ವೋಕೇಟ್ ಜನರಲ್ ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು'' ಎಂದು ಕೋರಿದರು.
ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ ಕೋರಿ ಆಯೋಗಕ್ಕೆ ಪತ್ರ ಬರೆದ ಸರಕಾರ
ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, "ಆಯೋಗ ಸಹ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದೆ. ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಬಹುದು ಎಂಬ ನಿಲುವು ತಿಳಿಸಿದ್ದಾರೆ'' ಎಂದು ಮಾಹಿತಿ ನೀಡಿದರು.
ಅದಕ್ಕೆ ನ್ಯಾಯಪೀಠ, ''ಕೊರೊನಾ ಸೋಂಕು ಕಡಿಮೆ ಇರುವ ಪ್ರದೇಶಗಳಲ್ಲಿ ಸದ್ಯ ಚುನಾವಣೆ ನಡೆಸಬಹುದಲ್ಲವೇ? ಪ್ರತ್ಯೇಕ ಹಂತದಲ್ಲಿ ಚುನಾವಣೆ ನಡೆಸಲು ಚಿಂತನೆ ಮಾಡಬಹುದಲ್ಲವೇ?'' ಎಂದು ಸರಕಾರಿ ವಕೀಲರನ್ನು ಪ್ರಶ್ನಿಸಿತು.
ಗ್ರಾಮ ಪಂಚಾಯಿತಿ ಎಲೆಕ್ಷನ್ ಮುಂದೂಡಿಕೆ ಅಸಾಧ್ಯ: ಚುನಾವಣಾ ಆಯೋಗ
ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ
ಆಯೋಗದ ವಕೀಲರು, "ಅದೇ ನಿಟ್ಟಿನಲ್ಲಿ ಆಯೋಗ ಕೂಡ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ಚಿಂತನೆ ನಡೆಸಲಾಗಿದೆ," ಎಂದು ವಿವರಿಸಿದರು.