ಆ್ಯಪ್ನಗರ

ರಾಜೀನಾಮೆ ಅಂಗೀಕಾರ ವಿಳಂಬ: ಸ್ಪೀಕರ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಅತೃಪ್ತರು

ರಾಜೀನಾಮೆ ವಾಪಸ್ ಪಡೆಯಲು ಸ್ಪೀಕರ್ ರಮೇಶ್ ಕುಮಾರ್ ಒತ್ತಡ ಹೇರುತ್ತಿದ್ದಾರೆ ಎಂದು ಐವರು ಅತೃತ್ತ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ.

Vijaya Karnataka Web 13 Jul 2019, 1:51 pm
ಬೆಂಗಳೂರು: ರಾಜೀನಾಮೆ ಅಂಗೀಕರಿಸಲು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರಾದ ಡಾ.ಸುಧಾಕರ್, ಎಂಟಿಬಿ ನಾಗರಾಜ್, ರೋಷನ್ ಬೇಗ್, ಮುನಿರತ್ನ ಮತ್ತು ಆನಂದ್ ಸಿಂಗ್ ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ ಸಲ್ಲಿಸಿದ್ದಾರೆ.
Vijaya Karnataka Web ramesh kumar


ದೋಸ್ತಿ ಸರಕಾರದ ಅಳಿವು-ಉಳಿವು: ರಾಜಕೀಯ ನಾಟಕದಲ್ಲಿ ಎಲ್ಲರ ಕಣ್ಣೂ ಇವರ ಮೇಲೆ

ರಾಜೀನಾಮೆ‌ ಅಂಗೀಕಾರ ಮಾಡಲು ಸ್ಪೀಕರ್ ಅನಗತ್ಯ ವಿಳಂಬ ಮಾಡಿತ್ತಿದ್ದು, ರಾಜೀನಾಮೆ ವಾಪಸ್ ಪಡೆಯಲು ಒತ್ತಡ ಹೇರುತ್ತಿದ್ದಾರೆ ಎಂದು ಅತೃಪ್ತ ಶಾಸಕರು ಆರೋಪಿಸಿದ್ದಾರೆ. ಅಷ್ಟೆ ಅಲ್ಲದೆ, ಸರಕಾರದಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತು ದಾಖಲೆಗಳನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.

ಸರಕಾರದ ದುರಾಡಳಿತದಿಂದ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅನಗತ್ಯ ವಿಳಂಬ ಮಾಡಿದ್ದಾರೆ. ಸರಕಾರದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ, ಅಧಿಕಾರಿಗಳ ‌ಮೂಲಕ‌‌‌‌ ಬೆದರಿಸುವ ಕೆಲಸ ಮಾಡಲಾಗಿದೆ ಎಂದವರು ಗಂಭೀರ ಆರೋಪ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ