ಆ್ಯಪ್ನಗರ

ಸಿದ್ದು ಎಚ್ಚರಿಕೆಗೆ ಡೋಂಟ್ ಕೇರ್ ಎಂದ ಭಿನ್ನರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆಗೆ ಅತೃಪ್ತ ಶಾಸಕರು ಕ್ಯಾರೇ ಎಂದಿಲ್ಲ.

Vijaya Karnataka Web 9 Jul 2019, 4:48 pm
ಬೆಂಗಳೂರು: ನಾವು ಯಾವುದಕ್ಕೂ ಹೆದರುವುದಿಲ್ಲ, ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅತೃಪ್ತ ಶಾಸಕರು ಖಡಕ್ ಸಂದೇಶ ರವಾನಿಸಿದ್ದಾರೆ.
Vijaya Karnataka Web e2a5744a-9b9b-449d-b1fe-c548ac985eb9.


ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆದರಿಕೆಗೆ ಕ್ಯಾರೇ ಎನ್ನದ ಭಿನ್ನ ಶಾಸಕರು, ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಬರುವ ಮೊದಲಿನಿಂದಲೂ ನಾವು ಕಾಂಗ್ರೆಸ್‌ನಲ್ಲಿದ್ದೇನೆ. ನಾವು ಹೆದರುವುದಿಲ್ಲ. ರಾಜೀನಾಮೆ ನಿರ್ಧಾರ ವಾಪಸ್ ಇಲ್ಲ ಎಂದಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಿಗೆ ಇದು ಕೊನೆಯ ಮನವಿ. ಈಗಲೂ ಅವರು ವಾಪಸ್ ಬಂದು ರಾಜೀನಾಮೆ ಹಿಂಪಡೆಯದಿದ್ದರೆ ಕ್ರಮಕ್ಕೆ ಸಿದ್ಧರಾಗಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಎಚ್ಚರಿಸಿದ್ದರು.

ವಿಧಾನಸೌಧದಲ್ಲಿ ನಡೆದ ಸಿಎಲ್‌ಪಿ ಸಭೆ ಬಳಿಕ ಮಾತನಾಡಿದ ಅವರು, ರಾಜೀನಾಮೆ ನೀಡಿರುವ ಶಾಸಕರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅವರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧರಿಸುತ್ತಾರೆ. ಬಲವಂತವಾಗಿ ರಾಜೀನಾಮೆ ಕೊಟ್ಟಿದ್ದಾರಾ? ಅಥವಾ ಸೂಕ್ತ ಕಾರಣಗಳಿಂದ ಕೊಟ್ಟಿದ್ದಾರಾ ಎನ್ನುವುದನ್ನು ಪರಿಶೀಲಿಸಲಾಗುತ್ತದೆ. ಒಂದು ವೇಳೆ ಅನರ್ಹಗೊಂಡರೆ 6 ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದಿದ್ದರು.

ಸಿದ್ದರಾಮಯ್ಯ ಅವರು ಎಸೆದ ಬಾಣಕ್ಕೆ ಉತ್ತರಿಸಿರುವ ಶಾಸಕ ಭೈರತಿ ಬಸವರಾಜ್, ನಾನು ಒಗ್ಗಟ್ಟಿನ ನಿರ್ಧಾರ ಮಾಡಿದ್ದೇವೆ. ನಮ್ಮ ಕೆಲಸ ಆಗದಿದ್ದರೆ ನಾವ್ಯಾಕೆ ಬಾಗಬೇಕು. ರಾಜೀನಾಮೆ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದಿದ್ದಾರೆ.

ನಾವು ಕಾಂಗ್ರೆಸ್ ಬಿಟ್ಟು ಹೋಗಿಲ್ಲ ಎಂದು ಎಸ್ ಟಿ ಸೋಮ ಅವರು ಹೇಳಿದರೆ, ಬಿಜೆಪಿ ಸೇರುವುದಿಲ್ಲ ಎಂದು ನಾರಾಯಣ ಗೌಡ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ