ಆ್ಯಪ್ನಗರ

ಅನರ್ಹ ಶಾಸಕರಿಗೆ ಮತ್ತೆ ನಿರಾಶೆ: ಸೆ.23ಕ್ಕೆ ವಿಚಾರಣೆ ಮುಂದೂಡಿಕೆ

- ತ್ರಿಸದಸ್ಯ ಪೀಠದಿಂದ ಹಿಂದೆ ಸರಿದ ನ್ಯಾ...

Vijaya Karnataka 18 Sep 2019, 5:00 am
ಹೊಸದಿಲ್ಲಿ: ಸ್ಪೀಕರ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ತಮ್ಮ ಅರ್ಜಿ ವಿಚಾರಣೆ ಮಂಗಳವಾರ ನಡೆಯಲಿದೆ ಎಂದು ಉತ್ಸಾಹದಲ್ಲಿದ್ದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಶಾಸಕರಿಗೆ ನಿರಾಸೆ ಎದುರಾಯಿತು. ನ್ಯಾ. ಮೋಹನ್‌ ಶಾಂತಗೌಡರ್‌ ಅವರು ಪೀಠದಿಂದ ಸರಿದ ಪರಿಣಾಮ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೆ.23ಕ್ಕೆ ಮುಂದೂಡಿತು.
Vijaya Karnataka Web 0607-2-2-320 (7)


ಮಂಗಳವಾರ ನ್ಯಾ. ಎಂ.ವಿ. ರಮಣ್‌ ನೇತೃತ್ವದ ತ್ರಿದಸದಸ್ಯ ಪೀಠದಲ್ಲಿಅನರ್ಹ ಶಾಸಕರ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ವಿಚಾರಣೆ ಆರಂಭವಾಗುತ್ತಿದ್ದಂತೆ ಪೀಠದಲ್ಲಿದ್ದ ಕರ್ನಾಟಕ ಮೂಲದ ನ್ಯಾ. ಮೋಹನ್‌ ಶಾಂತಗೌಡರ್‌ ಅವರು ವಿಚಾರಣೆಯಿಂದ ಹಿಂದೆ ಸರಿಯುವ ನಿರ್ಧಾರ ಪ್ರಕಟಿಸಿದರು. ಈ ಕಾರಣದಿಂದಾಗಿ ಸುಪ್ರೀಂ ಕೋರ್ಟ್‌ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸೆ.23ಕ್ಕೆ(ಸೋಮವಾರ) ಮುಂದೂಡಿತು.

ಏತನ್ಮಧ್ಯೆ, ''ಈಗಾಗಲೇ ಪ್ರಕರಣದ ವಿಚಾರಣೆ ವಿಳಂಭವಾಗಿದೆ,'' ಎಂದು ಅನರ್ಹ ಶಾಸಕರ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್‌, ''ವಿಚಾರಣೆ ಪ್ರಾರಂಭಿಸಲಾಗಿದೆ,'' ಎಂದು ತಿಳಿಸಿತು.

ಕುಮಾರಸ್ವಾಮಿ ನೇತೃತ್ವದ ಸರಕಾರಕ್ಕೆ ಬೆಂಬಲ ಹಿಂಪಡೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ 3 ಶಾಸಕರು ತಮ್ಮ ರಾಜೀನಾಮೆ ಅಂಗೀಕರಿಸುವಂತೆ ಸ್ಪೀಕರ್‌ಗೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಇದರ ಮಧ್ಯೆಯೇ ಸ್ಪೀಕರ್‌ ರಮೇಶ್‌ ಕುಮಾರ್‌ ಅವರು 17 ಶಾಸಕರನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಸ್ಪೀಕರ್‌ ಅವರ ಈ ತೀರ್ಪು ಪ್ರಶ್ನಿಸಿ ಅನರ್ಹಗೊಂಡ ಶಾಸಕರು ಸುಪ್ರೀಂ ಮೊರೆ ಹೋಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ