ಆ್ಯಪ್ನಗರ

ರೆಡ್ಡಿ ಪ್ರಕರಣ ತನಿಖೆಗೆ ರಾಜಕೀಯ ದ್ವೇಷ, ಅಧಿಕಾರ ದುರ್ಬಳಕೆ ಇಲ್ಲ: ಸಿಎಂ ಸ್ಪಷ್ಟನೆ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ 18 ಕೋಟಿ ರೂ...

Vijaya Karnataka 9 Nov 2018, 5:00 am
ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ 18 ಕೋಟಿ ರೂ. ಡೀಲ್‌ ಪ್ರಕರಣದಲ್ಲಿ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ಸರಕಾರದ ಮಧ್ಯಪ್ರವೇಶ ಇಲ್ಲ ಎಂದು ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web hdk2


''ಕಂಪನಿಯೊಂದು (ಅಂಬಿಡೆಂಟ್‌) ನಾನಾ ಆಮಿಷವೊಡ್ಡಿ ವಿಶೇಷವಾಗಿ ಅಲ್ಪಸಂಖ್ಯಾತ ಕುಟುಂಬಗಳಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿ ದೋಖಾ ಮಾಡಿದೆ. ಈ ಕಾನೂನುಬಾಹಿರ ಅಕ್ರಮದಲ್ಲಿ ಹಲವು ಪ್ರಮುಖ ವ್ಯಕ್ತಿಗಳು ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದೆ. ಈ ಸಂಬಂಧ ಸಾರ್ವಜನಿಕರ ದೂರು ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ'' ಎಂದು ಸ್ಪಷ್ಟನೆ ನೀಡಿದರು.

ದೇವೇಗೌಡರ ನಿವಾಸದಲ್ಲಿ ಆಂಧ್ರಪ್ರದೇಶ ಸಿಎಂ ಎನ್‌.ಚಂದ್ರಬಾಬು ನಾಯ್ಡು ಅವರೊಟ್ಟಿಗೆ ಚರ್ಚೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ''ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚನೆ ಮಾಡಿ ಹಲವು ಬಡಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಲಾಗಿದೆ. ಈ ಕಂಪನಿಯ ಹಿನ್ನೆಲೆ, ಹಣಕಾಸು ವಹಿವಾಟು, ಭಾಗಿಯಾಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ದೂರು ಆಧರಿಸಿ ಅಕ್ರಮ ಚಟುವಟಿಕೆ ಬಗ್ಗೆ ನಡೆಯುತ್ತಿರುವ ತನಿಖೆ ನಡೆಯುತ್ತಿದೆ. ಇದರಲ್ಲಿ ದ್ವೇಷದ ರಾಜಕಾರಣ ಅಥವಾ ಅಧಿಕಾರ ದುರ್ಬಳಕೆ ಮಾಡಿಕೊಂಡು ಯಾರಿಗೋ ತೊಂದರೆ ಕೊಡುವ ಉದ್ದೇಶ ಖಂಡಿತ ಇಲ್ಲ. ಈ ಕುರಿತಂತೆ ನಾನು ಸಾರ್ವಜನಿಕವಾಗಿ ಚರ್ಚೆ ಮಾಡಲು ಬಯಸುವುದಿಲ್ಲ'' ಎಂದು ಹೇಳಿದರು.

* ರೆಡ್ಡಿ ಪ್ರಕರಣದ ತನಿಖೆಯಲ್ಲಿ ಸರಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ, ಮಾಡುವುದೂ ಇಲ್ಲ. ಪೊಲೀಸರು ಕಾನೂನು ಪ್ರಕಾರ ತನಿಖೆ ನಡೆಸುತ್ತಿದ್ದಾರೆ. ತನಿಖೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಹೆಚ್ಚಿಗೆ ಏನನ್ನೂ ಮಾತನಾಡಲು ಬಯಸುವುದಿಲ್ಲ.

-ಡಿ.ಕೆ.ಶಿವಕುಮಾರ್‌, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ


* ಯಾರು ತಪ್ಪು ಮಾಡಿದ್ದರೂ ಶಿಕ್ಷೆ ಅನುಭವಿಸಬೇಕು, ಆದರೆ ಪ್ರತಿಯೊಂದು ಕಾನೂನು ಪ್ರಕಾರವೇ ನಡೆಯಬೇಕು.
-ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ