ಆ್ಯಪ್ನಗರ

ಇಡಿ ಉರುಳಲ್ಲಿ ಡಿಕೆಶಿ, ಎಸ್‌ಐಟಿ ಕುಣಿಕೆಯಿಂದ ಪಾರಾದ ಎಚ್‌ಡಿಕೆ

ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಚಾರ್ಜ್‌ಶೀಟ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೆಸರನ್ನು ಕೈ ಬಿಟ್ಟಿರುವುದು ತಿಳಿದು ಬಂದಿದೆ.

Bangalore Mirror Bureau 30 Aug 2019, 11:31 am
ಬೆಂಗಳೂರು: ಜಾರಿ ನಿರ್ದೇಶನಾಲಯ ಜಾರಿಗೊಳಿಸಿದ್ದ ಸಮನ್ಸ್‌ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಗುರುವಾರ ತಳ್ಳಿ ಹಾಕುವ ಮೂಲಕ ಪ್ರಭಾವಿ ಕಾಂಗ್ರೆಸ್‌ ನಾಯಕ ಡಿ.ಕೆ. ಶಿವಕುಮಾರ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಆದರೆ ಇದೇ ಅವಧಿಯಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸಿಹಿ ಸುದ್ದಿಯೊಂದನ್ನು ಪಡೆದಿದ್ದಾರೆ.
Vijaya Karnataka Web dk-shivakumar-hd kumaraswamy


ಜಂತಕಲ್‌ ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಚಾರ್ಜ್‌ಶೀಟ್‌ನಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೆಸರನ್ನು ಕೈ ಬಿಟ್ಟಿರುವುದು ತಿಳಿದು ಬಂದಿದೆ.

ತಮ್ಮ ಹೆಸರನ್ನು ಗೌಪ್ಯವಾಗಿಡಬೇಕು ಎಂಬ ಷರತ್ತಿನಲ್ಲಿ ‘ವಿಜಯ ಕರ್ನಾಟಕ’ ಸೋದರ ಪತ್ರಿಕೆ ‘ಬೆಂಗಳೂರು ಮಿರರ್‌’ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ ಹಿರಿಯ ಅಧಿಕಾರಿಯೊಬ್ಬರು, ಸಾಕ್ಷಾಧಾರಗಳ ಕೊರತೆಯಿಂದ ಕುಮಾರಸ್ವಾಮಿ ಹೆಸರನ್ನು ಚಾರ್ಜ್‌ಶೀಟ್‌ನಿಂದ ಕೈ ಬಿಟ್ಟಿರುವುದಾಗಿ ತಿಳಿಸಿದ್ದಾರೆ. ಮಾರ್ಚ್‌ 6ರಂದೇ ಈ ಚಾರ್ಜ್‌ಶೀಟನ್ನು ಸಲ್ಲಿಕೆ ಮಾಡಲಾಗಿದೆ.

2007ರಲ್ಲಿ ಗಣಿ ಮತ್ತು ಭೂಗರ್ಭ ಇಲಾಖೆ ಆಯುಕ್ತರಾಗಿದ್ದ ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ, ‘ಚಿತ್ರದುರ್ಗ ಮೂಲದ ಜಂತಕಲ್‌ ಗಣಿ ಕಂಪನಿಗೆ ಕಬ್ಬಿಣದ ಅದಿರನ್ನು ತೆಗೆಯಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನ ಮೇಲೆ ಒತ್ತಡ ಹೇರಿದ್ದರು,’ ಎಂದು ತಿಳಿಸಿದ್ದರು. 2017ರಲ್ಲಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿತ್ತು.

ಬಡೇರಿಯಾ ವಿರುದ್ಧದ ಚಾರ್ಜ್‌ಶೀಟ್‌ಗೆ ಅನುಮತಿ ಕೋರಿ ಸರಕಾರಕ್ಕೆ ಪತ್ರ

ಇನ್ನು ಬಡೇರಿಯಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಗೆ ಅನುಮತಿ ಕೋರಿ ಎಸ್‌ಐಟಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದೆ. ಸದ್ಯ ಎಸ್‌ಐಟಿ ಜಂತಕಲ್‌ ಗಣಿ ಕಂಪನಿ ಮಾಲಿಕ ವಿನೋದ್‌ ಗೋಯಲ್‌ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಿದೆ. ಪರಿಸರ ಮತ್ತು ಅರಣ್ಯ ಸಚಿವಾಲಯದ ನಕಲಿ ಪತ್ರಗಳನ್ನು ಸೃಷ್ಟಿಸಿದ ಆರೋಪ ಅವರ ಮೇಲಿದೆ. ಇದಲ್ಲದೆ ಗಂಗಾರಾಮ್‌ ಬಂಡೇರಿಯಾ ಪುತ್ರ ಗಗನ್‌ ಬಡೇರಿಯಾ ಹೆಸರು ಚಾರ್ಜ್‌ಶೀಟ್‌ನಲ್ಲಿದೆ. ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡಿದ ನಂತರ ಮತ್ತು ಮೊದಲು ಗಗನ್‌ ಖಾತೆಗೆ ಹಣ ವರ್ಗಾವಣೆ ಮಾಡಿರುವುದನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ