ಆ್ಯಪ್ನಗರ

ಕೋಡಿಹಳ್ಳಿ ಚಂದ್ರಶೇಖರ್‌ ಆಸ್ತಿ ತನಿಖೆಗೆ ರೇಣುಕಾಚಾರ್ಯ ಒತ್ತಾಯ

"ಕೋಡಿಹಳ್ಳಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪಾಸ್ತಿ ಸಂಪಾದಿಸಿರುವುದು ಹೇಗೆ ಎಂಬ ಬಗ್ಗೆ ತನಿಖೆಯಾಗಬೇಕು," ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

Vijaya Karnataka 18 Dec 2020, 8:26 pm
ಬೆಂಗಳೂರು: ರೈತ ಮುಖಂಡ ಎಂದು ಹೇಳಿಕೊಳ್ಳುವ ಕೋಡಿಹಳ್ಳಿ ಚಂದ್ರಶೇಖರ್‌ ಒಬ್ಬ ನಕಲಿ ಹೋರಾಟಗಾರ. ಅವರ ಆಸ್ತಿ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
Vijaya Karnataka Web Kodihalli Chandrasekhar


ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ, "ಕೋಡಿಹಳ್ಳಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪಾಸ್ತಿ ಸಂಪಾದಿಸಿರುವುದು ಹೇಗೆ ಎಂಬ ಬಗ್ಗೆ ತನಿಖೆಯಾಗಬೇಕು," ಎಂದು ಆಗ್ರಹಿಸಿದರು.

"ವಾಸ್ತವವಾಗಿ ಕೋಡಿಹಳ್ಳಿ ರೈತ ಹೋರಾಟಗಾರನೇ ಅಲ್ಲ. ಪವಿತ್ರವಾದ ಹಸಿರು ಶಾಲು ಹಾಕಿಕೊಂಡು ನಕಲಿ ಹೋರಾಟ ಮಾಡುತ್ತಿರುವ ವ್ಯಕ್ತಿ. ಈ ಮೂಲಕ ರೈತರಿಗೆ ಮೋಸ ಮಾಡುತ್ತಿರುವ ದಲ್ಲಾಳಿಯಾಗಿದ್ದಾರೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತುಟಿ ಬಿಚ್ಚದ ನಕಲಿ ರೈತ ನಾಯಕರು ಒಳ ಒಪ್ಪಂದ ಮಾಡಿಕೊಂಡಿದ್ದರು. ಈ ಹಿಂದೆ ಮಂಡ್ಯ, ಮೈಸೂರು ಭಾಗದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಾಗ ಸಾಂತ್ವನ ಹೇಳಿರಲಿಲ್ಲ. ಬೆಂಗಳೂರಿನಲ್ಲಿ ದೊಡ್ಡ ಮನೆ ಹೊಂದಿರುವ ಕೋಡಿಹಳ್ಳಿ ಹೆಸರಿನಲ್ಲಿ ಮೊದಲು ಎರಡೂವರೆ ಎಕರೆಯಿತ್ತು. ಬಳಿಕ ಕೋಟ್ಯಂತರ ರೂ. ಆಸ್ತಿ ಬಂದದ್ದು ಹೇಗೆ? ಜಮೀನಿನಲ್ಲಿ ಉತ್ತಿ ಬಿತ್ತಿ ಬೆಳೆದರಾ?," ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ