ಆ್ಯಪ್ನಗರ

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟು ಗೊತ್ತಾ?

ಆಗಸ್ಟ್ ತಿಂಗಳ ಆರಂಭದಲ್ಲಿ ರಾಜ್ಯದ ಬಹುತೇಕ ಕಡೆ ಅಬ್ಬರಿಸಿದ್ದ ವರುಣನ ಪ್ರತಾಪ ಈಗ ತಗ್ಗಿದೆ. ಆದರೆ ಕೆಲವೆಡೆ ಮಳೆ ಮುಂದುವರಿದಿದೆ. ಈ ಹಿನ್ನೆಲೆ ರಾಜ್ಯದ ಪ್ರಮುಖ ಜಲಾಶಯಗಳ ಪಟ್ಟಿ ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ.

Vijaya Karnataka Web 31 Aug 2019, 8:11 am
ಬೆಂಗಳೂರು: ದೇಶದ ಹಲವು ರಾಜ್ಯಗಳು ರಾಜ್ಯದ ಕರಾವಳಿ, ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ತಿಂಗಳ ಆರಂಭದಲ್ಲಿ ಭಾರಿ ಅನಾಹುತ ಸೃಷ್ಟಿಸಿದ್ದ ವರುಣ ದೇವ ಈಗ ತಣ್ಣಗಾಗಿದ್ದಾನೆ. ಈಗಲೂ ಕೆಲವೆಡೆ ಮಳೆಯಾಗುತ್ತಿದ್ದು ಜೀವನದಿಗಳು ಮೈದುಂಬಿ ಹರಿಯುತ್ತಿವೆ.
Vijaya Karnataka Web dam


ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ..

ಕೃಷ್ಣರಾಜಸಾಗರ ಆಣೆಕಟ್ಟಿನ ಗರಿಷ್ಠ ಮಟ್ಟ 124.80 ಅಡಿ ಇದ್ದು, ಇಂದಿನ ನೀರಿನ ಮಟ್ಟ ಕೂಡ ಅಷ್ಟೇ ಇದೆ. ಕಳೆದ ವರ್ಷ ಈ ದಿನ ಕೂಡ ಇಷ್ಟೇ ಪ್ರಮಾಣದಲ್ಲಿ ನೀರು ಶೇಖರವಾಗಿತ್ತು.

ಸದ್ಯ ಡ್ಯಾಂನಲ್ಲಿ 49.452 ಟಿಎಂಸಿ ನೀರಿಗೆ ಅವಕಾಶವಿದ್ದು, 41.073 ಟಿಎಂಸಿ ನೀರು ಸಂಗ್ರಹವಾಗಿದೆ. ನೀರಿನ ಒಳಹರಿವು 8740 ಕ್ಯೂಸೆಕ್ಸ್ ಆಗಿದ್ದು, ಹೊರಹರಿವು 6091ಕ್ಯೂಸೆಕ್ ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ