ಆ್ಯಪ್ನಗರ

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ

ರಾಜ್ಯದಲ್ಲಿ ವರುಣನ ಪ್ರತಾಪ ಈಗ ತಗ್ಗಿದೆ. ಆದರೆ ಕೆಲವೆಡೆ ಮಳೆ ಮುಂದುವರಿದಿದೆ. ಈ ಹಿನ್ನೆಲೆ ರಾಜ್ಯದ ಪ್ರಮುಖ ಜಲಾಶಯಗಳ ಪಟ್ಟಿ ಹೇಗಿದೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ.

Vijaya Karnataka Web 4 Sep 2019, 9:57 am
ಕಳೆದ ತಿಂಗಳ ಆರಂಭದಲ್ಲಿ ರಾಜ್ಯಾದ್ಯಂತ ಅಬ್ಬರಿಸಿದ್ದ ವರುಣ ಈಗ ಕೊಂಚ ತಣ್ಣಗಾಗಿದ್ದಾನೆ. ಆದರೆ ಮುಂಗಾರು ಕೂಡ ಚುರುಕಾಗಿರುವುದರಿಂದ ಕರಾವಳಿಯ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿಯಲ್ಲಿಇನ್ನೂ 4-5 ದಿನಗಳ ಕಾಲ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೂಡ ಆರೆಂಜ್‌ ಅಲರ್ಟ್‌ ಮುಂದುವರಿಯಲಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೃಷ್ಣಾ ನದಿಗೆ ಒಳ ಹರಿವು ಹೆಚ್ಚಿದೆ.
Vijaya Karnataka Web dam


ಕರಾವಳಿಯ ನದಿಗಳು, ಉತ್ತರ ಕರ್ನಾಟಕದ ಕೃಷ್ಣಾ ಸೇರಿದಂತೆ ಜೀವನದಿಗಳು ಮೈದುಂಬಿ ಹರಿಯುತ್ತಿದ್ದು, ಕರ್ನಾಟಕದಲ್ಲಿ ಇಂದಿನ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ..

ಕೆಆರ್‌ಎಸ್ ಆಣೆಕಟ್ಟಿನ ಗರಿಷ್ಠ ಮಿತಿ 124.80 ಅಡಿ ಇದ್ದು, ಇಂದಿನ ನೀರಿನ ಮಟ್ಟ ಕೂಡ ಅಷ್ಟೇ ಇದೆ. ಒಳ ಹರಿವು 12285 ಕ್ಯೂಸೆಕ್ಸ್ ಇದ್ದು, ಹೊರ ಹರಿವು 9568 ಕ್ಯೂಸೆಕ್ಸ್ ಇದೆ.

ಇದೇ ರೀತಿ ರಾಜ್ಯದ ಇತರೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ನೋಡೋಣ ಬನ್ನಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ