ಆ್ಯಪ್ನಗರ

ಬಿಜೆಪಿ ಪರ ಅಚ್ಚರಿಯ ಫಲಿತಾಂಶ : ಬಿಎಸ್‌ವೈ ವಿಶ್ವಾಸ

ಉತ್ತರ ಪ್ರದೇಶದಂತೆ ಅಚ್ಚರಿಯ ಫಲಿತಾಂಶ ರಾಜ್ಯದಲ್ಲೂ ಬರಲಿದ್ದು, ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಪಕ್ಷದ ...

Vijaya Karnataka 7 Apr 2018, 5:00 am
ಬೆಂಗಳೂರು: ಉತ್ತರ ಪ್ರದೇಶದಂತೆ ಅಚ್ಚರಿಯ ಫಲಿತಾಂಶ ರಾಜ್ಯದಲ್ಲೂ ಬರಲಿದ್ದು, ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web 0604-2-2-60


ಪಕ್ಷದ ಕಚೇರಿಯಲ್ಲಿ ಶುಕ್ರವಾರ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ''ಈ ಸಲ ಚುನಾವಣೆಯಲ್ಲಿ ಅಚ್ಚರಿಯ ಜನಾದೇಶ ನೀಡಲು ರಾಜ್ಯದ ಜನತೆ ಕಾತರರಾಗಿದ್ದಾರೆÜ,'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

''ದೇಶದೆಲ್ಲೆಡೆ ಬಿಜೆಪಿ ಪರವಾದ ಅಲೆ ಇದ್ದು, ರಾಜ್ಯದಲ್ಲೂ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಿದ್ದರಿಂದ ಸಣ್ಣಪುಟ್ಟ ಗೊಂದಲಗಳು ಸೃಷ್ಟಿಯಾಗಿವೆ. ಚುನಾವಣೆ ಗೆಲುವಿನ ಕಾರ್ಯತಂತ್ರ ರೂಪಿಸುವಲ್ಲಿ ಬಿಜೆಪಿ ಮುಂದಿದೆ. ಸಮೀಕ್ಷಾ ವರದಿ ಆಧರಿಸಿ ಕಳೆದೆರಡು ದಿನಗಳಿಂದ 140 ಕ್ಕೂ ಹೆಚ್ಚು ಕ್ಷೇತ್ರಗಳ ಟಿಕೆಟ್‌ ಹಂಚಿಕೆ ಸಂಬಂಧ ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ,'' ಎಂದು ತಿಳಿಸಿದರು.

ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಸಿ.ಟಿ.ರವಿ, ಸುರೇಶ್‌ಕುಮಾರ್‌ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಿಎಂ ಕ್ಷೇತ್ರಾಂತಕ್ಕೆ ಯಡಿಯೂರಪ್ಪ ಹೇಳಿಕೆ

''ಸ್ವಂತ ಕ್ಷೇತ್ರಗಳಾದ ಚಾಮುಂಡೇಶ್ವರಿ, ವರುಣ ಕ್ಷೇತ್ರಗಳಲ್ಲಿ ಸೋಲಿನ ಸ್ಪಷ್ಟತೆಯಿಂದಾಗಿ ಬೇರೊಂದು ಕ್ಷೇತ್ರ ಹುಡುಕುವ ದಯನೀಯ ಸ್ಥಿತಿಗೆ ಸಿಎಂ ಸಿದ್ದರಾಮಯ್ಯ ತಲುಪಿದ್ದಾರೆ. ಕಾಂಗ್ರೆಸ್‌ನಲ್ಲಿ ಗೊಂದಲ ಮನೆಮಾಡಿದ್ದು, ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗದೆ ಅವರ ಜಗಳ ಬೀದಿಗೆ ಬರುತ್ತದೆ,''

ಯಡಿಯೂರಪ್ಪ, (ಬೆಂಗಳೂರಿನಲ್ಲಿ ಹೇಳಿಕೆ)

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ