ಬೆಂಗಳೂರು: ಬಸ್ ತಂಗುದಾಣದಲ್ಲಿ ನಿಂತಿದ್ದ ಐವರ ಮೇಲೆ ಸ್ಕಾರ್ಪಿಯೊ ಹರಿದ ಪರಿಣಾಮ ಐವರು ಮೃತಪಟ್ಟಿದ್ದಾರೆ.
ಬೆಂಗಳೂರು-ಹಾಸನ ಮರ್ಗದ ಸೋಲೂರು ಬಳಿ ಈ ದುರ್ಘಟನೆ ಸಂಭವಿಸಿದೆ.
ಜಡೇಮಾಯಸಂದ್ರ ಬಳಿಯ ಮುತ್ತುಗದಹಳ್ಳಿಯ ಒಂದೇ ಕುಟುಂಬದವರು ಕೆಂಪರಾಜು, ಮಮತ, ಸೌಮ್ಯ, ಸಂಜನಾ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಉಪಹಾರ ಸೇವಿಸಲೆಂದು ಸೋಲೂರು ಬಳಿಯ ಸಾಹುಕಾರಪಾಳ್ಯ ಬಸ್ ತಂಗುದಾಣದಲ್ಲಿ ನಿಂತಿದ್ದರು.
ಈ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಅತ್ಯಂತ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟರು.
ಸ್ಕಾರ್ಪಿಯೊ ವಾಹನದಲ್ಲಿದ್ದ ಒಬ್ಬ ವ್ಯಕ್ತಿಯೂ ಮೃತಪಟ್ಟಿದ್ದಾನೆ.
ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ. ಗಾಯಾಳಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Road Accident: Five Killed
ಬೆಂಗಳೂರು-ಹಾಸನ ಮರ್ಗದ ಸೋಲೂರು ಬಳಿ ಈ ದುರ್ಘಟನೆ ಸಂಭವಿಸಿದೆ.
ಜಡೇಮಾಯಸಂದ್ರ ಬಳಿಯ ಮುತ್ತುಗದಹಳ್ಳಿಯ ಒಂದೇ ಕುಟುಂಬದವರು ಕೆಂಪರಾಜು, ಮಮತ, ಸೌಮ್ಯ, ಸಂಜನಾ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಉಪಹಾರ ಸೇವಿಸಲೆಂದು ಸೋಲೂರು ಬಳಿಯ ಸಾಹುಕಾರಪಾಳ್ಯ ಬಸ್ ತಂಗುದಾಣದಲ್ಲಿ ನಿಂತಿದ್ದರು.
ಈ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಅತ್ಯಂತ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟರು.
ಸ್ಕಾರ್ಪಿಯೊ ವಾಹನದಲ್ಲಿದ್ದ ಒಬ್ಬ ವ್ಯಕ್ತಿಯೂ ಮೃತಪಟ್ಟಿದ್ದಾನೆ.
ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ. ಗಾಯಾಳಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Road Accident: Five Killed