ಆ್ಯಪ್ನಗರ

ಭೀಕರ ರಸ್ತೆ ಅಪಘಾತ: ಐವರ ದುರ್ಮರಣ

ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ

Vijaya Karnataka Web 19 Oct 2017, 7:31 pm
ಬೆಂಗಳೂರು: ಬಸ್‌ ತಂಗುದಾಣದಲ್ಲಿ ನಿಂತಿದ್ದ ಐವರ ಮೇಲೆ ಸ್ಕಾರ್ಪಿಯೊ ಹರಿದ ಪರಿಣಾಮ ಐವರು ಮೃತಪಟ್ಟಿದ್ದಾರೆ.
Vijaya Karnataka Web road accident five killed
ಭೀಕರ ರಸ್ತೆ ಅಪಘಾತ: ಐವರ ದುರ್ಮರಣ


ಬೆಂಗಳೂರು-ಹಾಸನ ಮರ್ಗದ ಸೋಲೂರು ಬಳಿ ಈ ದುರ್ಘಟನೆ ಸಂಭವಿಸಿದೆ.

ಜಡೇಮಾಯಸಂದ್ರ ಬಳಿಯ ಮುತ್ತುಗದಹಳ್ಳಿಯ ಒಂದೇ ಕುಟುಂಬದವರು ಕೆಂಪರಾಜು, ಮಮತ, ಸೌಮ್ಯ, ಸಂಜನಾ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಉಪಹಾರ ಸೇವಿಸಲೆಂದು ಸೋಲೂರು ಬಳಿಯ ಸಾಹುಕಾರಪಾಳ್ಯ ಬಸ್ ತಂಗುದಾಣದಲ್ಲಿ ನಿಂತಿದ್ದರು.

ಈ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಅತ್ಯಂತ ವೇಗವಾಗಿ ಬಂದ ಸ್ಕಾರ್ಪಿಯೋ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟರು.

ಸ್ಕಾರ್ಪಿಯೊ ವಾಹನದಲ್ಲಿದ್ದ ಒಬ್ಬ ವ್ಯಕ್ತಿಯೂ ಮೃತಪಟ್ಟಿದ್ದಾನೆ.

ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ. ಗಾಯಾಳಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Road Accident: Five Killed

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ