ಆ್ಯಪ್ನಗರ

ಮತ್ತೆ ವಿಚಾರಣೆಗೆ ಹಾಜರಾಗದ ರೋಷನ್‌ಬೇಗ್‌

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳವಾರ ಕೂಡ ಶಿವಾಜಿನಗರದ ಶಾಸಕ ರೋಷನ್‌ಬೇಗ್‌ ವಿಚಾರಣೆಗೆ ಹಾಜರಾಗಲಿಲ್ಲ. ಇದೂ ಸೇರಿ ಒಟ್ಟು ಐದು ಬಾರಿ ಎಸ್‌ಐಟಿ ನೀಡಿದ್ದ ನೋಟಿಸ್‌ಗೂ ಮಹತ್ವ ನೀಡದ ಶಾಸಕರು ಮತ್ತೊಂದು ಅವಧಿಗೆ ಸಮಯಾವಕಾಶ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ.

Vijaya Karnataka 14 Aug 2019, 8:10 am
ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳವಾರ ಕೂಡ ಶಿವಾಜಿನಗರದ ಶಾಸಕ ರೋಷನ್‌ಬೇಗ್‌ ವಿಚಾರಣೆಗೆ ಹಾಜರಾಗಲಿಲ್ಲ. ಇದೂ ಸೇರಿ ಒಟ್ಟು ಐದು ಬಾರಿ ಎಸ್‌ಐಟಿ ನೀಡಿದ್ದ ನೋಟಿಸ್‌ಗೂ ಮಹತ್ವ ನೀಡದ ಶಾಸಕರು ಮತ್ತೊಂದು ಅವಧಿಗೆ ಸಮಯಾವಕಾಶ ಕೇಳಲಿದ್ದಾರೆ ಎಂದು ತಿಳಿದು ಬಂದಿದೆ.
Vijaya Karnataka Web Roshan Baig


ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಎಂಎ ಮಾಲೀಕ ಮನ್ಸೂರ್‌ ಖಾನ್‌ ನೀಡಿದ ಹೇಳಿಕೆ ಆಧರಿಸಿ ಶಾಸಕ ರೋಷನ್‌ ಬೇಗ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇದುವರೆಗೂ ಐದು ಬಾರಿ ನೋಟಿಸ್‌ ನೀಡಲಾಗಿದೆ. ಆದರೆ ಒಂದು ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ. ಆ.13ರ ಮಂಗಳವಾರ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗುತ್ತಾರೆ ಎಂದು ಎಸ್‌ಐಟಿ ಅಧಿಕಾರಿಗಳು ವಿಶ್ವಾಸ ಇಟ್ಟುಕೊಂಡಿದ್ದರು. ಆದರೆ ಮಂಗಳವಾರ ರಾತ್ರಿವರೆಗೂ ವಿಚಾರಣೆಗೆ ಹಾಜರಾಗಲಿಲ್ಲ.

ಮತ್ತೊಂದು ನೋಟಿಸ್‌

ಹಿಂದಿನ ಸರಕಾರದ ಅವಧಿಯಲ್ಲಿ ನೀಡಿದ್ದ ನೋಟಿಸ್‌ಗೂ ಮಾನ್ಯತೆ ನೀಡದೆ ಹೊಸ ಸರಕಾರದಲ್ಲಿ ನೀಡಿದ ನೋಟಿಸ್‌ಗಳಿಗೂ ಕೂಡ ಬೇಗ್‌ ಸಮಯಾವಕಾಶ ಪಡೆದುಕೊಂಡಿದ್ದರು. ಮಂಗಳವಾರ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಮತ್ತೊಂದು ದಿನವನ್ನು ನಿಗದಿಗೊಳಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ