ಬೆಂಗಳೂರು: ಕಳೆದ 4 ದಶಕಗಳ ರಾಜಕಾರಣದಲ್ಲಿ ಅಲ್ಪಸಂಖ್ಯಾತರ 'ಲೀಡರ್' ಆಗಿ ಬೆಳೆದಿದ್ದ ಕಾಂಗ್ರೆಸ್ನ ಮಾಜಿ ಸಚಿವ ಆರ್. ರೋಷನ್ ಬೇಗ್ ಅವರು ಐಎಂಎ ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಮೊದಲ ರಾಜಕಾರಣಿಯಾಗಿದ್ದಾರೆ.
ಬೆಂಗಳೂರು ನಗರದ ಹಿಂದಿನ ಜಯಮಹಲ್ ಹಾಗೂ ಈಗಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 7 ಸಲ ಶಾಸಕರಾಗಿ ಆಯ್ಕೆಯಾಗಿದ್ದ ರೋಷನ್ ಬೇಗ್ ಮೂಲತಃ ಜನತಾಪಕ್ಷದ ಕುಡಿ. ಆದರೆ ಬೆಳೆದದ್ದು ಕಾಂಗ್ರೆಸ್ನಲ್ಲಿ. ಮೊದಲ ಬಾರಿಗೆ 1985ರಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1984ರಿಂದ 1994ರವರೆಗೆ 10 ವರ್ಷಗಳ ಕಾಲ ಜನತಾ ಪಕ್ಷದಲ್ಲಿದ್ದ ಬೇಗ್ ನಂತರ ಜನತಾ ಪಕ್ಷ ವಿಭಜನೆ ಬಳಿಕ ಕಾಂಗ್ರೆಸ್ ಮನೆ ಸೇರಿದರು.
ರಾಮಕೃಷ್ಣ ಹೆಗಡೆ, ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಹೀಗೆ ಐವರು ಮುಖ್ಯಮಂತ್ರಿಗಳ ಸಂಪುಟದಲ್ಲಿ ಗೃಹ ಖಾತೆ, ಪ್ರವಾಸೋದ್ಯಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ, ವಾರ್ತಾ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳ ಸಚಿವರಾಗಿದ್ದರು. 25 ವರ್ಷಗಳಿಗೂ ಹೆಚ್ಚು ಕಾಲದ ಕಾಂಗ್ರೆಸ್ ರಾಜಕಾರಣದಲ್ಲಿ ಏಳು ಬೀಳುಗಳನ್ನು ಕಂಡಿದ್ದಾರೆ.
ದಿಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಅತ್ಯಂತ ನಿಕಟ ಸಂಪರ್ಕ, ಸಂಬಂಧ ಹೊಂದಿದ್ದರು. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡು ಕರ್ನಾಟಕದಲ್ಲಿ ಸಿ.ಕೆ.ಜಾಫರ್ ಷರೀಫ್ ನಂತರ ಮುಸ್ಲಿಂ ಸಮುದಾಯದ ನಾಯಕರಾಗಿ ಬೆಳೆದಿದ್ದರು.
ಕೈ ಪಾಳೆಯದಿಂದ ದೂರ
ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಆಗಿನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಹರಿಹಾಯ್ದು, ಸೋಲಿಗೆ ಇವರೇ ಕಾರಣವೆಂದು ಬೊಟ್ಟು ಮಾಡಿದ್ದರು. ಸಿದ್ದರಾಮಯ್ಯ ಅವರ ಉಡಾಫೆ ಹಾಗೂ ದಿನೇಶ್ ಗುಂಡೂರಾವ್ ಅವರ ಅಪ್ರಬುದ್ಧತೆಯೇ ಕಾರಣವೆಂದು ಆರೋಪಿಸಿದ್ದರು. ಬಳಿಕ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕಾಂಗ್ರೆಸ್ನಿಂದ ಸಸ್ಪೆಂಡ್ ಮಾಡಲಾಗಿತ್ತು. ಆಪರೇಷನ್ ಕಮಲದ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಹಾಗೂ ಕಾಂಗ್ರೆಸ್ನ 17 ಶಾಸಕರ ಪೈಕಿ ರೋಷನ್ ಬೇಗ್ ಕೂಡ ಒಬ್ಬರು. ಆದರೆ ಆಗಿನ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜೀನಾಮೆ ಅಂಗೀಕರಿಸದೆ ಇವರನ್ನು ಅನರ್ಹಗೊಳಿಸಿದ್ದರು.
ಸುಪ್ರೀಂಕೋರ್ಟ್ನಲ್ಲಿ ರಾಜೀನಾಮೆ ಪ್ರಕರಣ ಇತ್ಯರ್ಥಗೊಂಡ ಬಳಿಕ ಬಿಜೆಪಿ ಸೇರಲು ಪ್ರಯತ್ನಿಸಿದರು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒಂದೆರಡು ಸಲ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೆ ಅಷ್ಟೊತ್ತಿಗಾಗಲೇ ಐಎಂಎ ಪ್ರಕರಣದಲ್ಲಿ ಸಂಬಂಧವಿರುವುದು ಬಿಜೆಪಿ ವರಿಷ್ಠರಿಗೆ ಮನವರಿಕೆ ಆಗಿದ್ದರಿಂದ ಬಿಜೆಪಿ ಸೇರ್ಪಡೆ ಸಾಧ್ಯವಾಗಲಿಲ್ಲ.
ಬಿಜೆಪಿ ಬಾಗಿಲು ಬಂದ್
ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ನಕಲಿ ಛಾಪಾ ಕಾಗದ ಪ್ರಕರಣದ ಸಂಬಂಧ ಬಿಜೆಪಿ ಹಗಲು-ರಾತ್ರಿ ಸದನದಲ್ಲಿ ಧರಣಿ ನಡೆಸಿ ಬೇಗ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿತ್ತು. ಅಂತಿಮವಾಗಿ ಬೇಗ್ ರಾಜೀನಾಮೆ ಸಲ್ಲಿಸಬೇಕಾಯಿತು. ಹೀಗಾಗಿ, ಬೇಗ್ ಬಿಜೆಪಿ ಸೇರಲು ಮುಂದಾದರೂ ಅವರಿಗೆ ಬಿಜೆಪಿ ವರಿಷ್ಠರು ಬಾಗಿಲು ತೆರೆಯಲಿಲ್ಲ. ನಂತರ ಕಳೆದ ಡಿಸೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯದೆ ಬಿಜೆಪಿಗೆ ಬೆಂಬಲಿಸಿದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಜಯಗಳಿಸುವ ಮೂಲಕ ಶಿವಾಜಿನಗರದಲ್ಲಿ ರೋಷನ್ ಬೇಗ್ ರಾಜಕಾರಣ ತೆರೆಗೆ ಸರಿಯಿತು.
ಬೆಂಗಳೂರು ನಗರದ ಹಿಂದಿನ ಜಯಮಹಲ್ ಹಾಗೂ ಈಗಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 7 ಸಲ ಶಾಸಕರಾಗಿ ಆಯ್ಕೆಯಾಗಿದ್ದ ರೋಷನ್ ಬೇಗ್ ಮೂಲತಃ ಜನತಾಪಕ್ಷದ ಕುಡಿ. ಆದರೆ ಬೆಳೆದದ್ದು ಕಾಂಗ್ರೆಸ್ನಲ್ಲಿ. ಮೊದಲ ಬಾರಿಗೆ 1985ರಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1984ರಿಂದ 1994ರವರೆಗೆ 10 ವರ್ಷಗಳ ಕಾಲ ಜನತಾ ಪಕ್ಷದಲ್ಲಿದ್ದ ಬೇಗ್ ನಂತರ ಜನತಾ ಪಕ್ಷ ವಿಭಜನೆ ಬಳಿಕ ಕಾಂಗ್ರೆಸ್ ಮನೆ ಸೇರಿದರು.
ರಾಮಕೃಷ್ಣ ಹೆಗಡೆ, ಎಚ್.ಡಿ.ದೇವೇಗೌಡ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ, ಸಿದ್ದರಾಮಯ್ಯ ಹೀಗೆ ಐವರು ಮುಖ್ಯಮಂತ್ರಿಗಳ ಸಂಪುಟದಲ್ಲಿ ಗೃಹ ಖಾತೆ, ಪ್ರವಾಸೋದ್ಯಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ, ವಾರ್ತಾ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳ ಸಚಿವರಾಗಿದ್ದರು. 25 ವರ್ಷಗಳಿಗೂ ಹೆಚ್ಚು ಕಾಲದ ಕಾಂಗ್ರೆಸ್ ರಾಜಕಾರಣದಲ್ಲಿ ಏಳು ಬೀಳುಗಳನ್ನು ಕಂಡಿದ್ದಾರೆ.
ದಿಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಅತ್ಯಂತ ನಿಕಟ ಸಂಪರ್ಕ, ಸಂಬಂಧ ಹೊಂದಿದ್ದರು. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡು ಕರ್ನಾಟಕದಲ್ಲಿ ಸಿ.ಕೆ.ಜಾಫರ್ ಷರೀಫ್ ನಂತರ ಮುಸ್ಲಿಂ ಸಮುದಾಯದ ನಾಯಕರಾಗಿ ಬೆಳೆದಿದ್ದರು.
ಕೈ ಪಾಳೆಯದಿಂದ ದೂರ
ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಆಗಿನ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಹರಿಹಾಯ್ದು, ಸೋಲಿಗೆ ಇವರೇ ಕಾರಣವೆಂದು ಬೊಟ್ಟು ಮಾಡಿದ್ದರು. ಸಿದ್ದರಾಮಯ್ಯ ಅವರ ಉಡಾಫೆ ಹಾಗೂ ದಿನೇಶ್ ಗುಂಡೂರಾವ್ ಅವರ ಅಪ್ರಬುದ್ಧತೆಯೇ ಕಾರಣವೆಂದು ಆರೋಪಿಸಿದ್ದರು. ಬಳಿಕ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಕಾಂಗ್ರೆಸ್ನಿಂದ ಸಸ್ಪೆಂಡ್ ಮಾಡಲಾಗಿತ್ತು. ಆಪರೇಷನ್ ಕಮಲದ ಸಂದರ್ಭದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್ ಹಾಗೂ ಕಾಂಗ್ರೆಸ್ನ 17 ಶಾಸಕರ ಪೈಕಿ ರೋಷನ್ ಬೇಗ್ ಕೂಡ ಒಬ್ಬರು. ಆದರೆ ಆಗಿನ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜೀನಾಮೆ ಅಂಗೀಕರಿಸದೆ ಇವರನ್ನು ಅನರ್ಹಗೊಳಿಸಿದ್ದರು.
ಸುಪ್ರೀಂಕೋರ್ಟ್ನಲ್ಲಿ ರಾಜೀನಾಮೆ ಪ್ರಕರಣ ಇತ್ಯರ್ಥಗೊಂಡ ಬಳಿಕ ಬಿಜೆಪಿ ಸೇರಲು ಪ್ರಯತ್ನಿಸಿದರು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒಂದೆರಡು ಸಲ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೆ ಅಷ್ಟೊತ್ತಿಗಾಗಲೇ ಐಎಂಎ ಪ್ರಕರಣದಲ್ಲಿ ಸಂಬಂಧವಿರುವುದು ಬಿಜೆಪಿ ವರಿಷ್ಠರಿಗೆ ಮನವರಿಕೆ ಆಗಿದ್ದರಿಂದ ಬಿಜೆಪಿ ಸೇರ್ಪಡೆ ಸಾಧ್ಯವಾಗಲಿಲ್ಲ.
ಬಿಜೆಪಿ ಬಾಗಿಲು ಬಂದ್
ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ನಕಲಿ ಛಾಪಾ ಕಾಗದ ಪ್ರಕರಣದ ಸಂಬಂಧ ಬಿಜೆಪಿ ಹಗಲು-ರಾತ್ರಿ ಸದನದಲ್ಲಿ ಧರಣಿ ನಡೆಸಿ ಬೇಗ್ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿತ್ತು. ಅಂತಿಮವಾಗಿ ಬೇಗ್ ರಾಜೀನಾಮೆ ಸಲ್ಲಿಸಬೇಕಾಯಿತು. ಹೀಗಾಗಿ, ಬೇಗ್ ಬಿಜೆಪಿ ಸೇರಲು ಮುಂದಾದರೂ ಅವರಿಗೆ ಬಿಜೆಪಿ ವರಿಷ್ಠರು ಬಾಗಿಲು ತೆರೆಯಲಿಲ್ಲ. ನಂತರ ಕಳೆದ ಡಿಸೆಂಬರ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಣಕ್ಕಿಳಿಯದೆ ಬಿಜೆಪಿಗೆ ಬೆಂಬಲಿಸಿದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಜಯಗಳಿಸುವ ಮೂಲಕ ಶಿವಾಜಿನಗರದಲ್ಲಿ ರೋಷನ್ ಬೇಗ್ ರಾಜಕಾರಣ ತೆರೆಗೆ ಸರಿಯಿತು.