ಆ್ಯಪ್ನಗರ

ಆರ್‌ಟಿಇ ಕಾಯಿದೆಗೆ ತಿದ್ದುಪಡಿ: ರಾಜ್ಯಕ್ಕೆ ಸುಪ್ರೀಂ ನೋಟಿಸ್‌

ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಹಕ್ಕು ಕಾಯಿದೆಯಡಿ(ಆರ್‌ಟಿಇ) ಬಡವರಿಗೆ ಶೇ...

Vijaya Karnataka 20 Aug 2019, 5:00 am
ಹೊಸದಿಲ್ಲಿ: ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಹಕ್ಕು ಕಾಯಿದೆಯಡಿ(ಆರ್‌ಟಿಇ) ಬಡವರಿಗೆ ಶೇ.25 ರಷ್ಟು ಸೀಟು ನೀಡದೇ ಇರುವ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸುಪ್ರೀಂ ಕೋರ್ಟ್‌ ಸೋಮವಾರ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಈ ಕುರಿತು ಕಳೆದ ಮೇ ತಿಂಗಳಲ್ಲಿ ರಾಜ್ಯ ಹೈಕೋರ್ಟ್‌ ನೀಡಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
Vijaya Karnataka Web BNG-0602-2-2-RTE LOGO


ಖಾಸಗಿ ಶಿಕ್ಷಣ ಸಂಸ್ಥೆಗಳು ಬಡಮಕ್ಕಳಿಗೆ ನೀಡುತ್ತಿದ್ದ ಶೇ.25ರಷ್ಟು ಸೀಟುಗಳ ಸೌಲಭ್ಯವನ್ನು ಎಚ್‌. ಡಿ. ಕುಮಾರಸ್ವಾಮಿ ನೇತೃತ್ವದ ಹಿಂದಿನ ಸರಕಾರ ರದ್ದು ಪಡಿಸಿ ಕಾಯಿದೆಗೆ ತಿದ್ದುಪಡಿ ಮಾಡಿತ್ತು. ರಾಜ್ಯ ಸರಕಾರದ ಈ ನಿರ್ಧಾರವನ್ನು ಯೋಗಾನಂದ ಎಂಬುವವರು ಪಾಲಕರ ಸಂಘದ ಪರವಾಗಿ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು, ಕಾಯಿದೆ ತಿದ್ದುಪಡಿಗೆ ಆಧರಿಸಿದ ನಿಯಮಾವಳಿಗಳನ್ನು ಪರಿಶೀಲಿಸುವುದಾಗಿ ತಿಳಿಸಿತು.

ಕಾಯಿದೆಗೆ ತಿದ್ದುಪಡಿ ತಂದಿರುವುದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕೆಲವು ಪಾಲಕರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರಕಾರದ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಪಾಲಕರ ಸಂಘ ಸಲ್ಲಿಸಿದ ಅರ್ಜಿಯ ಪರ ಮೀನಾಕ್ಷಿ ಅರೋರಾ ವಾದ ಮಂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ