ಆ್ಯಪ್ನಗರ

ಬಾಳಿಗ ಹತ್ಯೆ ಪ್ರಕರಣ; ವಿಚಾರಣೆಗೆ ಮಧ್ಯಾಂತರ ತಡೆ

2016ರಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣ ಕುರಿತು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ...

Vijaya Karnataka 22 Aug 2019, 5:00 am
ಬೆಂಗಳೂರು: 2016ರಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣ ಕುರಿತು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್‌ ಬುಧವಾರ ಮಧ್ಯಂತರ ತಡೆ ನೀಡಿದೆ.
Vijaya Karnataka Web hamer


ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಅಧೀನ ನ್ಯಾಯಾಲಯದ ವಿಚಾರಣೆಯನ್ನು ತಡೆ ಹಿಡಿಯುವಂತೆ ಕೋರಿ ಮೃತರ ಸಹೋದರಿ ಅನುರಾಧ ಬಾಳಿಗ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೈಕೆಲ್‌ ಕುನ್ಹಾ ,ಅಧೀನ ನ್ಯಾಯಾಲಯದ ವಿಚಾರಣೆಗೆ ಎರಡು ವಾರ ಕಾಲ ತಡೆಯಾಜ್ಞೆ ನೀಡಿತು.

ಅನುರಾಧ ಬಾಳಿಗ ಹೈಕೋರ್ಟ್‌ಗೆ ಮಧ್ಯಾಂತರ ಅರ್ಜಿ ಸಲ್ಲಿಸಿ, ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಪರ ವಾದಿಸಲು ವಕೀಲ ಎನ್‌.ರವೀಂದ್ರ ನಾಥ್‌ ಕಾಮತ್‌ರನ್ನು ಎಸ್‌ಪಿಸಿಯಾಗಿ ನೇಮಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಎಸ್‌ಪಿಪಿ ನೇಮಕ ವಿಚಾರ ಇತ್ಯರ್ಥವಾಗದೆ ಹತ್ಯೆ ಪ್ರಕರಣದ ವಿಚಾರಣೆ ನಡೆಯುವುದು ಸೂಕ್ತವಲ್ಲ ಎಂದು ಆಕ್ಷೇಪಿಸಿದ್ದರು.

2016ರ ಮಾರ್ಚ್‌ 21ರಂದು ಮಂಗಳೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆಯಾಗಿದ್ದರು. ಹತ್ಯೆ ಸಂಬಂಧ ತನಿಖಾಧಿಕಾರಿಗಳು ಆರೋಪಿ ನರೇಶ್‌ ಶೈಣೈಯನ್ನು ಬಂಧಿಸಿದ್ದರು. ಬಳಿಕ ಆರೋಪಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ಈ ಮಧ್ಯೆ ಅನುರಾಧ ಬಾಳಿಗ ಮನವಿ ಮೇರೆಗೆ ಪ್ರಾಸಿಕ್ಯೂಷನ್‌ ಪರ ವಾದ ಮಂಡಿಸಲು ವಕೀಲ ಎನ್‌.ರವೀಂದ್ರ ಕಾಮತ್‌ ವಿಶೇಷ ಸರಕಾರಿ ಅಭಿಯೋಜಕರನ್ನಾಗಿ ನೇಮಿಸಿ ಸರಕಾರವು 2016ರ ಮಾ.21ರಂದು ಆದೇಶಿಸಿತ್ತು.

ಈ ಆದೇಶ ರದ್ದು ಕೋರಿ ನರೇಶ್‌ ಶೈಣೈ 2017ರ ಜ.6ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಸರಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಈ ಮಧ್ಯೆ ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಮುಖ್ಯ ವಿಚಾರಣೆಯನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ 2019ರ ಆ.28ರಂದು ವಿಚಾರಣೆಗೆ ನಿಗದಿಪಡಿಸಿತ್ತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ