ಆ್ಯಪ್ನಗರ

ಆರ್‌ಟಿಒ ಲಂಚಾವತಾರ: ವಿಚಾರಣೆಗೆ ಲೋಕಾಯುಕ್ತ ಆದೇಶ

ಆರ್‌ಟಿಒ ಕಚೇರಿಗಳ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ವಿಕ ಪ್ರಕಟಿಸಿದ ವಿಶೇಷ ವರದಿ 'ಡ್ರೈವಿಂಗ್‌ ಲೈಸೆನ್ಸ್‌- ಕೈ ಹಿಡಿದು ನಡೆಸುವ ...

Vijaya Karnataka 31 Jul 2019, 5:00 am
ಬೆಂಗಳೂರು: ಆರ್‌ಟಿಒ ಕಚೇರಿಗಳ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು ವಿಕ ಪ್ರಕಟಿಸಿದ ವಿಶೇಷ ವರದಿ 'ಡ್ರೈವಿಂಗ್‌ ಲೈಸೆನ್ಸ್‌- ಕೈ ಹಿಡಿದು ನಡೆಸುವ ದಲ್ಲಾಳಿಗಳು'' (22/7/ 2019) ಆಧರಿಸಿ
Vijaya Karnataka Web rto office corruption
ಆರ್‌ಟಿಒ ಲಂಚಾವತಾರ: ವಿಚಾರಣೆಗೆ ಲೋಕಾಯುಕ್ತ ಆದೇಶ


ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆಗೆ ಆದೇಶಿಸಿದ್ದಾರೆ.

ಕಲಿಕಾ ಚಾಲನ ಪರವಾನಗಿ ಮತ್ತು ಚಾಲನ ಪರವಾನಗಿ ವಿತರಣೆಯಲ್ಲಿ ಮಧÜ್ಯವರ್ತಿಗಳು ಮತ್ತು ಏಜೆಂಟರ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಸಾರಿಗೆ ಇಲಾಖೆ ಕಾರ್ಯದರ್ಶಿ, ಆಯುಕ್ತರು ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಅಲ್ಲದೇ, ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರು ಸಾರಿಗೆ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಸೂಚಿಸಿದ್ದಾರೆ.

ಸಾರಿಗೆ ಇಲಾಖೆಯ ಸೇವೆಗಳ ಜಾರಿಯಲ್ಲಿ ಗಂಭೀರ ಸ್ವರೂಪದ ದುರಾಡಳಿತ ನಡೆದಿರುವುದು ಪತ್ರಿಕೆಯ ವರದಿಯಿಂದ ಗೊತ್ತಾಗುತ್ತದೆ. ಇದರಿಂದ ಸಾವಿರಾರು ಜನರಿಗೆ ತೊಂದರೆಯಾಗುತ್ತದೆ. ಈ ಕಾರಣದಿಂದ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುತ್ತಿದ್ದೇವೆ. ಲೋಪವೆಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಸಾರ್ವಜನಿಕರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಹೀಗಾಗಿ, ಸಾರಿಗೆ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ ಜಂಟಿ ಆಯುಕ್ತರಿಗೆ ನೋಟಿಸ್‌ ನೀಡಲಾಗಿದೆ. ವರದಿಯಲ್ಲಿ ಆರೋಪಿಸಲಾಗಿರುವ ಸಮಸ್ಯೆಗಳ ಕುರಿತು ಪರಿಶೀಲಿಸಿ ಆರು ವಾರಗಳಲ್ಲಿ ಉತ್ತರ ನೀಡಬೇಕು ಎಂದು ತಿಳಿಸಿದ್ದಾರೆ.

ಇದೇ ವೇಳೆ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರು, ಸಾರಿಗೆ ಇಲಾಖೆ ಕಚೇರಿಗಳಿಗೆ ಭೇಟಿ ಕೊಟ್ಟು ಕಾರ್ಯ ನಿರ್ವಹಣೆಯ ಕುರಿತು ಮಾಹಿತಿ ಸಂಗ್ರಹಿಸಿ ಲೋಕಾಯುಕ್ತ ಹೆಚ್ಚುವರಿ ರಿಜಿಸ್ಟ್ರಾರ್‌ ವಿಚಾರಣೆಗಳು-1 ಅವರಿಗೆ 6 ವಾರಗಳಲ್ಲಿ ವರದಿ ನೀಡಬೇಕು ಎಂದು ತಿಳಿಸಿರುವ ಲೋಕಾಯುಕ್ತರು, ವಿಚಾರಣೆಯನ್ನು ಸೆಪ್ಟೆಂಬರ್‌ 18ಕ್ಕೆ ನಿಗದಿಪಡಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ