ಆ್ಯಪ್ನಗರ

ಜು.20ಕ್ಕೆ ಲಾರಿ ಮುಷ್ಕರ: ಸಾರಿಗೆ ಇಲಾಖೆಯಿಂದ ನಿಯಂತ್ರಣ ಕೊಠಡಿ

ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಸಂಘದ ಒಕ್ಕೂಟವು ಸರಕು ಸಾಗಣೆ ಸ್ಥಗಿತಗೊಳಿಸಿ ಜು. 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯು ಪ್ರತಿಯೊಂದು ಜಿಲ್ಲೆಯಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುತ್ತಿದೆ.

Vijaya Karnataka Web 17 Jul 2018, 10:19 pm
ಬೆಂಗಳೂರು: ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರುಗಳ ಸಂಘದ ಒಕ್ಕೂಟವು ಸರಕು ಸಾಗಣೆ ಸ್ಥಗಿತಗೊಳಿಸಿ ಜು. 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯು ಪ್ರತಿಯೊಂದು ಜಿಲ್ಲೆಯಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುತ್ತಿದೆ.
Vijaya Karnataka Web lorry strike 2


ಲಾರಿ ಮುಷ್ಕರದ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇತರೆ ಅಹಿತಕರ ಘಟನೆಗಳ ಬಗ್ಗೆ ನಿಗಾ ವಹಿಸಲು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುತ್ತಿದೆ.

ಹಾಗೆಯೇ, ಇಲ್ಲಿಂದ ಮಾಹಿತಿ ಪಡೆದುಕೊಂಡು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪರಿಸ್ಥಿತಿ ಸುಧಾರಿಸಲು ಸಾರಿಗೆ ಆಯುಕ್ತರ ಕಚೇರಿಯಲ್ಲೂ ನಿಯಂತ್ರಣ ಕೊಠಡಿ ತೆರೆಯಲಾಗುವುದು. ಆ ಮೂಲಕ ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ: 080- 22225805/22213785.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ