ಆ್ಯಪ್ನಗರ

ಋುಣ ಪರಿಹಾರ ಕಾಯಿದೆ ಸಿಂಧುತ್ವ ಪ್ರಶ್ನಿಸಿ ಅರ್ಜಿ: ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿ

ಹಿಂದಿನ ಸಮ್ಮಿಶ್ರ ಸರಕಾರ ಜಾರಿಗೊಳಿರುವ ಕರ್ನಾಟಕ ಋುಣ ಪರಿಹಾರ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ...

Vijaya Karnataka 11 Aug 2019, 5:00 am
ಬೆಂಗಳೂರು: ಹಿಂದಿನ ಸಮ್ಮಿಶ್ರ ಸರಕಾರ ಜಾರಿಗೊಳಿರುವ ಕರ್ನಾಟಕ ಋುಣ ಪರಿಹಾರ ಕಾಯಿದೆಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.
Vijaya Karnataka Web haamer


ಕರ್ನಾಟಕ ರಾಜ್ಯ ಜ್ಯುವೆಲ್ಲರಿ ಫೆಡರೇಷನ್‌ನ (ಕೆಎಸ್‌ಜೆಎಫ್‌)ಪ್ರಧಾನ ಕಾರ್ಯದರ್ಶಿ ಡಾ. ಬಿ.ರಾಮಾಚಾರಿ ಸಲ್ಲಿಸಿರುವ ಅರ್ಜಿ ಆಲಿಸಿದ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರಿದ್ದ ಪೀಠ, ಸರಕಾರದ ಮುಖ್ಯ ಕಾರ್ಯದರ್ಶಿ, ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, ಸಹಕಾರ ಇಲಾಖೆ ಸೇರಿ ಎಲ್ಲ ಪ್ರತಿವಾದಿಗಳಿಗೆ ಜಾರಿಗೊಳಿಸಿದೆ.

ಅಲ್ಲದೆ, ಅರ್ಜಿ ಸಂಬಂಧ 2 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಆ.28ಕ್ಕೆ ಮುಂದೂಡಿದೆ.

ಅರ್ಜಿದಾರರು, ''ಗಿರವಿ ವ್ಯಾಪಾರಿಗಳಿಗೆ ಹಾಗೂ ಲೇವಾದೇವಿದಾರರಿಗೆ ಸರಕಾರವೇ ಕಾನೂನು ಪ್ರಕಾರ ಪರವಾನಗಿ ನೀಡಿ,ತೆರಿಗೆಯನ್ನೂ ಸಂಗ್ರಹಿಸುತ್ತಿದೆ.ವಹಿವಾಟು ನಡೆಸಲು ಹಲವು ನಿಯಮಗಳನ್ನು ರೂಪಿಸಿರುವ ಸರಕಾರ, ವ್ಯವಸ್ಥಿತವಾಗಿ ಕಾನೂನು ಚೌಕಟ್ಟಿನಲ್ಲಿ ವ್ಯವಹರಿಸಲು ಅವಕಾಶ ಕಲ್ಪಿಸಿದೆ. ಆದರೆ ಕಾಯಿದೆ ಜಾರಿಗೆ ತರುವ ಮೂಲಕ ಗಿರವಿ ವ್ಯಾಪಾರಿಗಳ ವಹಿವಾಟು ನಷ್ಟ ಮಾಡುತ್ತಿರುವುದು ಸರಿಯಲ್ಲ ,''ಎಂದು ದೂರಿದ್ದಾರೆ.

''ರೈತರು ಬ್ಯಾಂಕ್‌ಗಳಲ್ಲಿ ಪಡೆದ ಸಾಲ ಮನ್ನಾ ಮಾಡಿದ್ದ ಸರಕಾರ, ಬ್ಯಾಂಕ್‌ಗಳಿಗೆ ತನ್ನ ಬೊಕ್ಕಸದಿಂದ ಹಣ ಮರು ಪಾವತಿಸಿದೆ. ಆದರೆ, ಲೇವಾದೇವಿದಾರರಿಂದ ಪಡೆದ ಹಣ ಮನ್ನಾ ಮಾಡಿರುವ ಸರಕಾರ ನಮಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ. ಇದರಿಂದ ಕಾನೂನು ಪ್ರಕಾರ ಪರವಾನಗಿ ಪಡೆದು ಗಿರವಿ ವ್ಯಾಪಾರದಲ್ಲಿ ತೊಡಗಿಕೊಂಡಿದ್ದ ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಇದು ಸಂವಿಧಾನದ 14ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಋುಣ ಪರಿಹಾರ ಕಾಯಿದೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು,'' ಕೋರಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ