ಆ್ಯಪ್ನಗರ

ಪರಿಶಿಷ್ಟ ವರ್ಗದ ಮೀಸಲು ಪ್ರಮಾಣ ಹೆಚ್ಚಳಕ್ಕೆ ಆಗ್ರಹ

ರಾಜ್ಯದ ಪರಿಶಿಷ್ಟ ವರ್ಗದವರಿಗೆ 2011ರ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿರುವ ಮೀಸಲು ಪ್ರಮಾಣವನ್ನು ಶೇ 3ರಿಂದ ಶೇ...

Vijaya Karnataka 6 Jun 2019, 5:00 am
ಬೆಂಗಳೂರು: ರಾಜ್ಯದ ಪರಿಶಿಷ್ಟ ವರ್ಗದವರಿಗೆ 2011ರ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿರುವ ಮೀಸಲು ಪ್ರಮಾಣವನ್ನು ಶೇ. 3ರಿಂದ ಶೇ.7ಕ್ಕೆ ಹೆಚ್ಚಿಸುವಂತೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್‌ ಆಗ್ರಹಿಸಿದೆ.
Vijaya Karnataka Web sc reservetion
ಪರಿಶಿಷ್ಟ ವರ್ಗದ ಮೀಸಲು ಪ್ರಮಾಣ ಹೆಚ್ಚಳಕ್ಕೆ ಆಗ್ರಹ


''2011ರ ಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ವರ್ಗ 42.48 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದಾರೆ. ಗಣತಿ ನಡೆದು 8 ವರ್ಷಗಳಲ್ಲಿ ಜನಸಂಖ್ಯೆ ಪ್ರಮಾಣ ಶೇ. 7ಕ್ಕಿಂತ ಹೆಚ್ಚಾಗಿದೆ. ಆದರೆ ನಾನಾ ಹುದ್ದೆಗಳಿಗೆ ನೇಮಕ ಮತ್ತು ಶೈಕ್ಷಣಿಕ ಸಂಸ್ಥೆಗಳ ಪ್ರವೇಶದಲ್ಲಿ ಶೇ. 3ರಷ್ಟು ಮೀಸಲು ನಿಗದಿಪಡಿಸಲಾಗಿದೆ. ಇದರಿಂದ ಪರಿಶಿಷ್ಟ ಪಂಗಡದವರಿಗೆ ಅನ್ಯಾಯ ಆಗುತ್ತಿದೆ,'' ಎಂದು ಸಮಾಜದ ಪ್ರಸನ್ನಾನಂದ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.

ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಗಳನ್ನು ಪಡೆದು ಕೆಲವರು ಮೀಸಲನ್ನು ಕಬಳಿಸುತ್ತಿದ್ದಾರೆ. ಅಂಥಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತ್ಯೇಕ ಪರಿಶಿಷ್ಟ ವರ್ಗದ ಸಚಿವಾಲಯ ಸ್ಥಾಪಿಸಬೇಕು,''ಎಂದು ಒತ್ತಾಯಿಸಿದರು.

ಸಮಾಜದ ಮುಖಂಡರಾದ ಶಿವಪ್ಪ, ದೇವೇಂದ್ರಪ್ಪ, ಮುನಿಸ್ವಾಮಿ, ವೀರೇಂದ್ರಸಿಂಹ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ