ಆ್ಯಪ್ನಗರ

ಹೆಚ್ಚುತ್ತಿರುವ ಕೊರೊನಾ ಸೋಂಕು: ಆಗಸ್ಟ್‌ ಅಂತ್ಯದವರೆಗೂ ಶಾಲೆ ಬಂದ್‌; 'ವಿದ್ಯಾಗಮ' ಯೋಜನೆ ಜಾರಿಗೆ ಶಿಕ್ಷಣ ಇಲಾಖೆ ಕ್ರಮ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳನ್ನು ಆ.31ರವರೆಗೆ ಸಂಪೂರ್ಣವಾಗಿ ಬಂದ್‌ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Vijaya Karnataka Web 4 Aug 2020, 7:28 am
ಬೆಂಗಳೂರು: ಕೋವಿಡ್‌-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳನ್ನು ಆ.31ರವರೆಗೆ ಸಂಪೂರ್ಣವಾಗಿ ಬಂದ್‌ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಶಾಲೆಗಳಿಗೆ ಆಗಮಿಸಿ 'ವಿದ್ಯಾಗಮ' ಮಾರ್ಗದರ್ಶಿ ಸೂತ್ರಗಳ ಅನ್ವಯ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಕೊರೊನಾ ಸೋಂಕು ಹರಡುವಿಕೆ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ ಜು.31ರವರೆಗೆ ಎಲ್ಲಾ ಶಾಲೆಗಳನ್ನು ಬಂದ್‌ ಮಾಡಿ ಹಿಂದೆ ಶಿಕ್ಷಣ ಇಲಾಖೆ ಆದೇಶಿಸಿತ್ತು. ಜತೆಗೆ, ಶಿಕ್ಷಕರಿಗೂ ಜುಲೈ ಅಂತ್ಯದವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿತ್ತು. ಆಗಸ್ಟ್‌ ತಿಂಗಳಲ್ಲೂ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿರುವುದರಿಂದ ಇಲಾಖೆ ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಈ ನಡುವೆ, ಎಲ್ಲಾ ವಿದ್ಯಾರ್ಥಿಗಳನ್ನು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸುವ ಸಂಬಂಧ 'ವಿದ್ಯಾಗಮ' ಯೋಜನೆಯನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ