ಬೆಂಗಳೂರು: ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಎಲ್ಲಾ ಸರಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳನ್ನು ಆ.31ರವರೆಗೆ ಸಂಪೂರ್ಣವಾಗಿ ಬಂದ್ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ, ಎಲ್ಲಾ ಶಿಕ್ಷಕರು ಕಡ್ಡಾಯವಾಗಿ ಶಾಲೆಗಳಿಗೆ ಆಗಮಿಸಿ 'ವಿದ್ಯಾಗಮ' ಮಾರ್ಗದರ್ಶಿ ಸೂತ್ರಗಳ ಅನ್ವಯ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದೆ.
ಕೊರೊನಾ ಸೋಂಕು ಹರಡುವಿಕೆ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ ಜು.31ರವರೆಗೆ ಎಲ್ಲಾ ಶಾಲೆಗಳನ್ನು ಬಂದ್ ಮಾಡಿ ಹಿಂದೆ ಶಿಕ್ಷಣ ಇಲಾಖೆ ಆದೇಶಿಸಿತ್ತು. ಜತೆಗೆ, ಶಿಕ್ಷಕರಿಗೂ ಜುಲೈ ಅಂತ್ಯದವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿತ್ತು. ಆಗಸ್ಟ್ ತಿಂಗಳಲ್ಲೂ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿರುವುದರಿಂದ ಇಲಾಖೆ ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಈ ನಡುವೆ, ಎಲ್ಲಾ ವಿದ್ಯಾರ್ಥಿಗಳನ್ನು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸುವ ಸಂಬಂಧ 'ವಿದ್ಯಾಗಮ' ಯೋಜನೆಯನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ.
ಕೊರೊನಾ ಸೋಂಕು ಹರಡುವಿಕೆ ವ್ಯಾಪಕವಾಗುತ್ತಿದ್ದ ಹಿನ್ನೆಲೆಯಲ್ಲಿ ಜು.31ರವರೆಗೆ ಎಲ್ಲಾ ಶಾಲೆಗಳನ್ನು ಬಂದ್ ಮಾಡಿ ಹಿಂದೆ ಶಿಕ್ಷಣ ಇಲಾಖೆ ಆದೇಶಿಸಿತ್ತು. ಜತೆಗೆ, ಶಿಕ್ಷಕರಿಗೂ ಜುಲೈ ಅಂತ್ಯದವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿತ್ತು. ಆಗಸ್ಟ್ ತಿಂಗಳಲ್ಲೂ ಕೊರೊನಾ ಸೋಂಕಿನ ಆರ್ಭಟ ಮುಂದುವರೆದಿರುವುದರಿಂದ ಇಲಾಖೆ ಮತ್ತು ಶಾಲೆಗಳಿಗೆ ರಜೆ ಘೋಷಿಸಿದೆ. ಈ ನಡುವೆ, ಎಲ್ಲಾ ವಿದ್ಯಾರ್ಥಿಗಳನ್ನು ನಿರಂತರವಾಗಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸುವ ಸಂಬಂಧ 'ವಿದ್ಯಾಗಮ' ಯೋಜನೆಯನ್ನು ಜಾರಿಗೆ ತರಲು ಕ್ರಮ ಕೈಗೊಂಡಿದೆ.