ಆ್ಯಪ್ನಗರ

'ಹಲ್ಲೆ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ' - ಎಸ್‌ಡಿಪಿಐ ಸ್ಪಷ್ಟೀಕರಣ

ಇಂಡಿಯಾ ಫಾರ್‌ ಸಿಎಎ ಕಾರ್ಯಕರ್ತ ವರುಣ್ ಮೇಲಿನ ಹಲ್ಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( ಎಸ್‌ಡಿಪಿಐ ) ಸ್ಪಷ್ಟೀಕರಣ ನೀಡಿ ಪತ್ರಿಕಾ ಹೇಳಿಕೆ ನೀಡಿದೆ.

Vijaya Karnataka Web 17 Jan 2020, 5:52 pm
ಬೆಂಗಳೂರು: ಇಂಡಿಯಾ ಫಾರ್‌ ಸಿಎಎ ಕಾರ್ಯಕರ್ತ ವರುಣ್ ಹಲ್ಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಎಸ್‌ಡಿಪಿಐ ಪಕ್ಷ ಪತ್ರಿಕಾ ಹೇಳಿಕೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಆರು ಮಂದಿ ಆರೋಪಿಗಳು ಪಕ್ಷದ ಕಾರ್ಯಕರ್ತರಲ್ಲ ಎಂದು ಎಂದಿದೆ.
Vijaya Karnataka Web sdpi says media and police charges are false
'ಹಲ್ಲೆ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ' - ಎಸ್‌ಡಿಪಿಐ ಸ್ಪಷ್ಟೀಕರಣ


ಎಸ್‌ಡಿಪಿಐ ರಾಜ್ಯ ಸಮಿತಿ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟೀಕರಣ ನೀಡಿದ್ದು ಸಿಎಎ ಹಾಗೂ ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯನ್ನು ದಾರಿ ತಪ್ಪಿಸುವ ಉದ್ಧೇಶದಿಂದ ಎಸ್‌ಡಿಪಿಐ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದೆ.

ವರುಣ್ ಮೇಲೆ ನಡೆದ ಹಲ್ಲೆ ಘಟನೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ನಮಗೆ ಹಿಂಸೆಯ ಮೇಲೆ ನಂಬಿಕೆ ಇಲ್ಲ ಎಂದಿರುವ ಎಸ್‌ಡಿಪಿಐ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ನಡೆಸಿ ನೈಜ್ಯ ಆರೋಪಿಗಳನ್ನು ಪತ್ತೆಮಾಡಲಿ ಎಂದು ಒತ್ತಾಯಿಸಿದೆ.

ಇಂಥ ಸ್ಕೆಚ್‌ಗಳು, ಹೆದರಿಕೆಗೆ ಬಗ್ಗುವುದಿಲ್ಲ, ಶಾಂತಿ ಕದಡಲು ದೇಶ ವಿರೋಧಿಗಳ ಹುನ್ನಾರ: ಚಕ್ರವರ್ತಿ ಸೂಲಿಬೆಲೆ

ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಇಂಡಿಯಾ ಫಾರ್‌ ಸಿಎಎ ಕಾರ್ತಕರ್ತ ವರುಣ್ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದ ಆರೋಪದಡಿಯಲ್ಲಿ ಆರು ಮಂದಿ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳ ವಿಚಾರಣೆಯ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡಲು ಎಸ್‌ಡಿಪಿಐ ಕಾರ್ಯಕರ್ತರು ಸಂಚು ರೂಪಿಸಿದ್ದರು ಎಂಬ ಆರೋಪವಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ