ಆ್ಯಪ್ನಗರ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಆಲ್ ದಿ ಬೆಸ್ಟ್ ವಿದ್ಯಾರ್ಥಿಗಳೇ

ಸಿಸಿಟಿಗಳ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರ (ಮಾ.1) ಪ್ರಾರಂಭವಾಗಲಿದ್ದು, 'ಕರ್ನಾಟಕ ಸೆಕ್ಯೂರ್‌ ಎಕ್ಸಾಮಿನೇಷನ್‌ ಸಿಸ್ಟಮ್‌'ನಡಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ತಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

Vijaya Karnataka 1 Mar 2019, 7:08 am
ಬೆಂಗಳೂರು :ಸಿಸಿಟಿಗಳ ಕಣ್ಗಾವಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುಕ್ರವಾರ (ಮಾ.1) ಪ್ರಾರಂಭವಾಗಲಿದ್ದು, 'ಕರ್ನಾಟಕ ಸೆಕ್ಯೂರ್‌ ಎಕ್ಸಾಮಿನೇಷನ್‌ ಸಿಸ್ಟಮ್‌'ನಡಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ತಡೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
Vijaya Karnataka Web exam


ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಮೊದಲನೇ ದಿನ ಅರ್ಥಶಾಸ್ತ್ರ ಹಾಗೂ ಭೌತಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದೆ. ರಾಜ್ಯದ 1,013 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 6,73,606 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಮಾ. 18ರಂದು ಪರೀಕ್ಷೆ ಕೊನೆಗೊಳ್ಳಲಿದೆ.

ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೇ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮನೆಯಿಂದ ಕಾಲೇಜಿಗೆ ತೆರಳಲು ಬಳಸುತ್ತಿದ್ದ ಬಸ್‌ ಪಾಸನ್ನೇ ಪ್ರದರ್ಶಿಸಿ ಪರೀಕ್ಷಾ ಕೇಂದ್ರಗಳಿಗೆ ತೆರಳಬಹುದು.

ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಶಿಕ್ಷಣ ಖಾತೆಯನ್ನು ಹೊಂದಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ಮೇಲೆ ತೀವ್ರ ನಿಗಾ ವಹಿಸುವುದರ ಜತೆಗೆ, ಅಗತ್ಯ ಬಿದ್ದರೆ ಪರೀಕ್ಷಾ ವೇಳೆ ವಶಕ್ಕೆ ತೆಗೆದುಕೊಳ್ಳುವಂತೆಯೂ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ