ಆ್ಯಪ್ನಗರ

ಸಾರ್ವಜನಿಕರೇ ಎಚ್ಚರ ! ಭಾನುವಾರ ರಾತ್ರಿ 9 ರಿಂದ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ

ಭಾನುವಾರ ರಾತ್ರಿ 9 ಗಂಟೆಯಿಂದ ಜನತಾ ಕರ್ಫ್ಯೂ ಅವಧಿ ಮುಕ್ತಾಯಗೊಂಡರೂ ಕರ್ನಾಟಕದಾದ್ಯಂತ ರಾತ್ರಿ 12 ಗಂಟೆಯ ವರೆಗೂ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

Vijaya Karnataka Web 22 Mar 2020, 4:23 pm
ಬೆಂಗಳೂರು: ಭಾನುವಾರ ರಾತ್ರಿ 9 ಗಂಟೆಯ ಬಳಿಕ ಜನತಾ ಕರ್ಫ್ಯೂ ಅವಧಿ ಮುಕ್ತಾಯಗೊಂಡರೂ ಮುಂಜಾಗರೂಕತಾ ಕ್ರಮವಾಗಿ ಸೆಕ್ಷನ್‌ 144 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾತ್ರಿ ಒಂಬತ್ತು ಗಂಟೆಯ ನಂತರ ಗುಂಪಾಗಿ ಜನರು ಸೇರಲು ಅವಕಾಶವಿಲ್ಲ.
Vijaya Karnataka Web police


ಜನತಾ ಕರ್ಫ್ಯೂ ಅವಧಿ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೊರಗಡೆ ಜಮಾಯಿಸುವ ಸಾಧ್ಯತೆ ಇರುವುದರಿಂದ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.

ಕೊರೊನಾ ಮುನ್ನೆಚ್ಚರಿಕೆ: ರಾಜ್ಯದ 9 ಜಿಲ್ಲೆಗಳು ಮಾರ್ಚ್ ಅಂತ್ಯದವರೆಗೆ ಸಂಪೂರ್ಣ ಬಂದ್

ರಾಜ್ಯದಲ್ಲಿ ಜನತಾ ಕರ್ಫ್ಯೂ ಮುಕ್ತಾಯಗೊಂಡರು ಸೋಮವಾರದಿಂದ ಒಂಬತ್ತು ಜಿಲ್ಲೆಗಳು ಲಾಕ್‌ಡೌನ್ ಆಗಲಿವೆ. ಮಾರ್ಚ್‌ 31ರವರೆಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಬೆಳಗಾವಿ ಸೇರಿದಂತೆ ಕೋವಿಡ್-19 ಪ್ರಕರಣ ಕಂಡುಬಂದಿರುವ ಈ 9 ಜಿಲ್ಲೆಗಳಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ಒಂಬತ್ತು ಜಿಲ್ಲೆಗಳು ಲಾಕ್‌ಡೌನ್ ಆದ್ರೂ ಪಿಯುಸಿ ಪರೀಕ್ಷೆ ನಡೆಯುತ್ತೆ! ಏನಿದು ಸರ್ಕಾರದ ನಿರ್ಧಾರ?

ಈ ಒಂಬತ್ತು ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಇತರೆ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್‌ -19 ಸೋಂಕಿನ 21 ಪ್ರಕರಣಗಳು ದೃಢಪಟ್ಟಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಕಂಡುಬಂದ ಶಂಕೆಯಲ್ಲಿ ಹಲವರ ಮೇಲೆ ನಿಗಾ ಇಡಲಾಗಿದೆ. ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರ ಒಂಬತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ