ಆ್ಯಪ್ನಗರ

ಯಾರಿಗೆ ಹೇಳಿ ಡಿಕೆಶಿ ಮುಂಬಯಿಗೆ ಹೋದ್ರು: ಸಿದ್ದರಾಮಯ್ಯ ಅಸಮಾಧಾನ

ಕರ್ನಾಟಕ ರಾಜಕೀಯ ಹೈ ಡ್ರಾಮ ಇಡೀ ದೇಶದ ಗಮನ ಸೆಳೆದಿದೆ. ಮುಂಬಯಿಯಲ್ಲಿ ಡಿಕೆಶಿ ತಂಡ ಹೋಟೆಲ್‌ ಮುಂದೆ ಇದ್ದರೆ, ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಪ್ರತಿಭಟನೆ ನಡೆಸಿದರು.

Vijaya Karnataka Web 10 Jul 2019, 1:46 pm
ಬೆಂಗಳೂರು: ಕರ್ನಾಟಕ ರಾಜಕೀಯ ಹೈ ಡ್ರಾಮಾ ಈಗ ಮುಂಬಯಿಗೆ ಶಿಫ್ಟ್‌ ಆಗಿದೆ. ಅತೃಪ್ತರ ಮನವೊಲಿಕೆಗೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ತೆರಳಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಆದರೆ ಈಗ ಅಸಮಾಧಾನ ನಿವಾರಿಸಲು ತೆರಳಿರುವ ಡಿಕೆ ಶಿವಕುಮಾರ್‌ ವಿರುದ್ಧವೇ ಅಸಮಾಧಾನ ವ್ಯಕ್ತವಾಗಿದೆ.

ಕಾಂಗ್ರೆಸ್‌ ಹಿರಿಯ ನಾಯಕರ ಕೆಂಗಣ್ಣಿಗೆ ಡಿಕೆ ಶಿವಕುಮಾರ್ ಗುರಿಯಾಗಿದ್ದಾರೆ.

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಗುಟುರು ಹಾಕಿದ್ದಾರೆ. ಹೊಸದಿಲ್ಲಿಯಿಂದ ಆಗಮಿಸಿರುವ ಗುಲಾಂ ನಬಿ ಆಜಾದ್‌ ಕೂಡ ಡಿಕೆಶಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮುಂಬಯಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್‌ ಮಂಗಳವಾರ ರಾತ್ರಿ 3 ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಜತೆ ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡಿಕೆಶಿ, ಬುಧವಾರ ಬೆಳಗ್ಗೆ ಜೆಡಿಎಸ್‌ ಶಾಸಕರು, ಸಚಿವರ ಜತೆ ಮುಂಬಯಿಗೆ ತೆರಳುತ್ತಿದ್ದೇನೆ ಎಂದು ಹೇಳಿದರು.

ಆದರೆ ಮುಂಬಯಿಗೆ ತೆರಳುತ್ತಿರುವ ವಿಷಯವನ್ನು ಕಾಂಗ್ರೆಸ್‌ ಹಿರಿಯ ಮುಖಂಡರ ಜತೆ ಡಿಕೆಶಿ ಚರ್ಚೆ ನಡೆಸಲಿಲ್ಲ ಎನ್ನುವುದು ಆಕ್ಷೇಪಕ್ಕೆ ಕಾರಣವಾಗಿದೆ.

ಮುಂಬಯಿಗೆ ತೆರಳಿರ ಡಿಕೆಶಿಗೆ ಹೋಟೆಲ್ ಒಳಗೆ ಹೋಗಲು ಬಿಡಲಿಲ್ಲ. ಬೀದಿಯಲ್ಲಿಯೇ ನಿಂತುಕೊಂಡಿದ್ದಾರೆ. ಇಡೀ ದೇಶ ಈಗ ಮುಂಬಯಿ ಹೋಟೆಲ್‌ನತ್ತ ನೋಡುತ್ತಿದೆ. ಇದು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಸಿದ್ದರಾಮಯ್ಯ ಆಪ್ತರು ಹಾಗೂ ಹಿರಿಯ ನಾಯಕರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಅತೃಪ್ತ ಶಾಸಕರು ಡಿಕೆ ಶಿವಕುಮಾರ್‌ ಜತೆ ಮಾತುಕತೆ ನಡೆಸಲು ಇಂಗಿತ ವ್ಯಕ್ತಪಡಿಸಿಲ್ಲ. ಅಲ್ಲದೇ ಡಿಕೆಶಿ ಮತ್ತು ಕುಮಾರಸ್ವಾಮಿ ವಿರುದ್ಧವೇ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಪರಿಸ್ಥಿತಿ ಹೀಗಿದ್ದಾಗ ಡಿಕೆ ಶಿವಕುಮಾರ್‌ ಒನ್‌ ಮ್ಯಾನ್‌ ಶೋ ನೀಡಲು ಮುಂಬಯಿಗೆ ಹೋಗಿ ಪಕ್ಷಕ್ಕೆ ಮುಜುಗರ ತಂದಿದ್ದಾರೆ ಎಂದು ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ