ಆ್ಯಪ್ನಗರ

ಸರಕಾರ ಕಾಶ್ಮೀರಿಗಳ ವಿಶ್ವಾಸಗಳಿಸಲಿ: ಮಾಜಿ ಪ್ರಧಾನಿ ದೇವೇಗೌಡ ಸಲಹೆ

ಕಾಶ್ಮೀರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಲ್ಲಿ ಬಿಕ್ಕಟ್ಟು ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿದೇವೇಗೌಡ ಹೇಳಿದ್ದಾರೆ

Vijaya Karnataka 16 Aug 2019, 5:00 am
ಬೆಂಗಳೂರು: ಕಾಶ್ಮೀರದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಲ್ಲಿ ಬಿಕ್ಕಟ್ಟು ಮುಂದುವರಿಯಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
Vijaya Karnataka Web sensitivity continued in kashmir says devegowda
ಸರಕಾರ ಕಾಶ್ಮೀರಿಗಳ ವಿಶ್ವಾಸಗಳಿಸಲಿ: ಮಾಜಿ ಪ್ರಧಾನಿ ದೇವೇಗೌಡ ಸಲಹೆ


ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,''ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದಾಗಿರುವುದರಿಂದ ಸ್ವಲ್ಪಮಟ್ಟಿಗೆ ಬಿಕ್ಕಟ್ಟು ಉಂಟಾಗಿದೆ. ಹೆಚ್ಚು ಸೇನಾ ಸಿಬ್ಬಂದಿ ನಿಯೋಜಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಕೇಂದ್ರ ಸರಕಾರ ಅಲ್ಲಿನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು. ಸಹಬಾಳ್ವೆ ಬದುಕು ನಡೆಸಲು ಪೂರಕ ಸನ್ನಿವೇಶ ಸೃಷ್ಟಿ ಮಾಡಬೇಕು. ಇಂತಹ ಬಿಕ್ಕಟ್ಟನ್ನು ಹೆಚ್ಚು ಕಾಲ ಮುಂದುವರಿಯಲು ಅವಕಾಶ ನೀಡಬಾರದು'' ಎಂದು ಸಲಹೆ ಮಾಡಿದರು.

''ಕೇಂದ್ರ ಸರಕಾರ ಹೇಳುವುದೊಂದು ಮಾಡುವುದೊಂದು ಎಂಬ ಭಾವನೆ ಬರುತ್ತಿದೆ. ಲಕ್ಷಾಂತರ ಮಂದಿ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದಲ್ಲಿ ಕೃಷಿಕ ಸಮುದಾಯದ ಸಂಕಷ್ಟ ಹೆಚ್ಚುತ್ತಿದೆ. ಮಕ್ಕಳ ಅಪೌಷ್ಟಿಕ ಸಮಸ್ಯೆ ಸೇರಿ ಅನೇಕ ಜ್ವಲಂತ ಸಮಸ್ಯೆಗಳು ಎದುರಾಗಿವೆ'' ಎಂದರು.

ಮುಖಂಡರಾದ ಎಂ.ಎಸ್‌.ನಾರಾಯಣರಾವ್‌, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಆರ್‌.ಪ್ರಕಾಶ್‌ ಮತ್ತಿತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ