ಆ್ಯಪ್ನಗರ

ಶರತ್‌ ಬಚ್ಚೇಗೌಡ ಉಚ್ಚಾಟನೆ; ಸಂಜೆಯೊಳಗೆ ನಿಗಮ ಮಂಡಳಿ ಸ್ಥಾನ ತ್ಯಜಿಸಬೇಕು: ಸಿಎಂ ಯಡಿಯೂರಪ್ಪ

ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಶರತ್ ಬಚ್ಚೇಗೌಡರನ್ನು ಉಚ್ಚಾಟನೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ಅಲ್ಲದೆ, ಎಂ.ಟಿ.ಬಿ. ನಾಗರಾಜ್ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿಯೂ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.

Vijaya Karnataka Web 17 Nov 2019, 11:47 am
ಬೆಂಗಳೂರು: ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ. ನಾಗರಾಜ್ ವಿರುದ್ದ ಬಂಡಾಯ ಸ್ಪರ್ಧೆ ಮಾಡಿರುವ ಶರತ್ ಬಚ್ಚೇಗೌಡರನ್ನು ಪಕ್ಷದಿಂದ ಉಚ್ಚಾಟಿಸಲಾಗುವುದು ಎಂದು ಸಿಎಂ‌ ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web yeddyurappa


ಈ ಸುದ್ದಿ ಓದಿ: ರಂಗೇರಿದ ಹೊಸಕೋಟೆ ಉಪ ಚುನಾವಣೆ ಕದನ: ಎಂಟಿಬಿ ನಾಗರಾಜ್‌, ಶರತ್‌ ಬಚ್ಚೇಗೌಡ ನಾಮಪತ್ರ ಸಲ್ಲಿಕೆ

ಶರತ್ ಬಚ್ಚೇಗೌಡ ನೂರಕ್ಕೆ ನೂರರಷ್ಟು ಸೋಲುವುದು ಖಚಿತ. ತಮ್ಮ ವಿರುದ್ದ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ದೂರು ನೀಡಿರುವುದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಾಂಗ್ರೆಸ್ ನಾಯಕರಿಗೆ ಬೇರೆ ಕೆಲಸವಿಲ್ಲದ ಕಾರಣ ಇಂತಹ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಆದ್ಯತೆ ಕೊಡುವ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲಿದೆ. ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ಗೆಲುವು ನಿಶ್ಚಿತ. ಅಂತಹ ಪ್ರಾಮಾಣಿಕರನ್ನು ಜನ ಬೆಂಬಲಿಸುವುದು ನಿಶ್ಚಿತ ಎಂದೂ ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿದ್ದಾರೆ.

ಇದನ್ನೂ ಓದಿ: ಎಂಟಿಬಿ ಬಾಯಿಂದ ಸ್ಫೋಟಗೊಂಡ ‘ರಾಜೀನಾಮೆ ರಹಸ್ಯ’: ಅನರ್ಹ ಶಾಸಕ ಸಿಡಿಸಿದ್ರು ಹೊಸ ಬಾಂಬ್

ಅಲ್ಲದೆ, ಇಂದು ಸಂಜೆಯೊಳಗೆ ಶರತ್ ಬಚ್ಚೇಗೌಡ ನಿಗಮ ಮಂಡಳಿ ಸ್ಥಾನ ತ್ಯಜಿಸಬೇಕು. ಉಪಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲಾಗುವುದು. ನನಗೆ ಸಂಪೂರ್ಣ ವಿಶ್ವಾಸವಿದ್ದು ಬಿಜೆಪಿಯ ಎಲ್ಲ ಅಭ್ಯರ್ಥಿಗಳು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೊಸಕೋಟೆ ಉಪ ಚುನಾವಣೆ: ಶರತ್‌ ಬಚ್ಚೇಗೌಡ ಜತೆ ಮಾತುಕತೆ ನಡೆಸಿ ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ

ಇನ್ನು, ನಾಳೆ ಹೊಸಕೋಟೆಯಲ್ಲಿ ಎಂಟಿಬಿ ನಾಮಪತ್ರ ಸಲ್ಲಿಸಲಿದ್ದು ನಾನು ಆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ ಎಂದೂ ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ