ಆ್ಯಪ್ನಗರ

'ಸಿಎಂ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತಿದೆ': ಶಿವರಾಜ್ ತಂಗಡಗಿ ವ್ಯಂಗ್ಯ

ನನ್ನದು ತಂತಿ ಮೇಲಿನ ನಡಿಗೆ ಎಂದು ಸಿಎಂ ಯಡಿಯೂರಪ್ಪ ನೀಡಿರುವ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸಿಎಂಗೆ ಇಂಥಾ ಪರಿಸ್ಥಿತಿ ಏಕೆ ಬಂತು ಎಲ್ಲರೂ ಪ್ರಶ್ನೆ ಮಾಡುತ್ತಿದ್ದಾರೆ. 17 ಶಾಸಕರ ರಾಜೀನಾಮೆ ಕೊಡಿಸುವಾಗ ಇದ್ದ ಶಕ್ತಿ, ಈಗಿಲ್ಲವೇ ಎಂದು ಶಿವರಾಜ್ ತಂಗಡಗಿ ಲೇವಡಿ ಮಾಡಿದ್ದಾರೆ.

Vijaya Karnataka Web 30 Sep 2019, 5:47 pm
ಕೊಪ್ಪಳ: ‘ನಿಜವಾಗ್ಲೂ ಸಿಎಂ ಯಡಿಯೂರಪ್ಪ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತಿದೆ’ ಎಂದು ಮಾಜಿ ಸಚಿವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ತಂಗಡಗಿ ವ್ಯಂಗ್ಯವಾಡಿದ್ದಾರೆ. ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ತಂಗಡಗಿ ಮಾತನಾಡುತ್ತಿದ್ದರು. 17 ಶಾಸಕರು ರಾಜೀನಾಮೆ ಸಲ್ಲಿಸುವ ವೇಳೆಯಲ್ಲಿ ಯಡಿಯೂರಪ್ಪಗೆ ಇದ್ದ ಶಕ್ತಿ ಈಗ ಇಲ್ಲ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.
Vijaya Karnataka Web shivaraj tangadagi cm


ನನ್ನದು ತಂತಿಯ ಮೇಲಿನ ನಡಿಗೆ: ಬಿಎಸ್‌ವೈ

ಯಡಿಯೂರಪ್ಪನವರ ಶಕ್ತಿ ಕುಗ್ಗಿಸುವ ಕೆಲಸ‌ ನಡೆಯುತ್ತಿದೆ ಎಂದಿರುವ ಶಿವರಾಜ್ ತಂಗಡಗಿ, ರಾಜ್ಯದ ಮುಖ್ಯಮಂತ್ರಿಗೆ ತಂತಿಯ ಮೇಲೆ ನಡೆಯುವ ಪರಿಸ್ಥಿತಿ ಬರಬಾರದಿತ್ತು ಎಂದು ಹೇಳಿದರು. ಭಾನುವಾರವಷ್ಟೇ ದಾವಣಗೆರೆಯಲ್ಲಿ ಮಾತನಾಡಿದ್ದ ಸಿಎಂ ಬಿ. ಎಸ್. ಯಡಿಯೂರಪ್ಪ ತಮ್ಮದು ತಂತಿಯ ಮೇಲಿನ ನಡಿಗೆ ಎಂದು ಹೇಳಿದ್ದರು.

ಮುಖ್ಯಮಂತ್ರಿ ಅವರು ತಂತಿಯ ಮೇಲೆ ನಡೆಯುವಂಥಾ ಪರಿಸ್ಥಿಗೆ ಬರಲು ಯಾರು ಕಾರಣ ಎನ್ನುವುದನ್ನು ಯಡಿಯೂರಪ್ಪನವರೇ ಬಹಿರಂಗಗೊಳಿಸಬೇಕು ಎಂದು ತಂಗಡಗಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ಹಿರಿಯ ರಾಜಕಾರಣಿಯಾಗಿದ್ದು, ಅವರಿಗೆ ಈ ಪರಿಸ್ಥಿತಿ ಬರಬಾರದಾಗಿತ್ತು ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ ಶಿವರಾಜ್ ತಂಗಡಗಿ, ನಮ್ಮ ಪಕ್ಷ ಸಾಮೂಹಿಕ ನಾಯಕತ್ವವನ್ನು ನಂಬುತ್ತದೆ ಎಂದಿದ್ದಾರೆ. ಅಧಿವೇಶನ ಆರಂಭಕ್ಕೆ ಮುನ್ನವೇ ಸಿದ್ದರಾಮಯ್ಯ ಅವರು ಪ್ರತಿಪಕ್ಷ‌ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಪಾಪ, ಯಡಿಯೂರಪ್ಪನವರನ್ನು ನೋಡಿದರೆ ಅಯ್ಯೋ ಅನಿಸುತ್ತದೆ’ - ಸಿದ್ದರಾಮಯ್ಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ