ಆ್ಯಪ್ನಗರ

ಕಾಸರಗೋಡು ಯುವತಿ ಮೇಲೆ ಅತ್ಯಾಚಾರ: ಇಂದು ಶೋಭಾ ಕರಂದ್ಲಾಜೆಯಿಂದ ದೂರು ಸಲ್ಲಿಕೆ

ಕಾಸರಗೋಡು ಮೂಲದ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ದೂರು ನೀಡಲಿದ್ದಾರೆ. ಭಾನುವಾರ ಬೆಳಗ್ಗೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ಗೆ ದೂರು ಸಲ್ಲಿಸಲಿದ್ದಾರೆ.

Vijaya Karnataka Web 5 Jan 2020, 11:54 am
ಬೆಂಗಳೂರು: ಕೇರಳದ ಕಾಸರಗೋಡಿನ ಯುವತಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಸಂಸದೆ ಶೋಭಾ ಕರಂದ್ಲಾಜೆ ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಭಾನುವಾರ ಬೆಳಗ್ಗೆ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ಗೆ ದೂರು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
Vijaya Karnataka Web shobha karandlaje toi


ಕಾಸರಗೋಡಿನ ಯುವತಿ ಮೇಲೆ ಅತ್ಯಾಚಾರವೆಸಗಿ ಮಾನಸಿಕ ಹಿಂಸೆ ಕೊಡುವುದರ ಮೂಲಕ ನೀನು ಇಸ್ಲಾಂಗೆ ಮತಾಂತರ ಕೊಳ್ಳಬೇಕೆಂಬ ಬೆದರಿಕೆ ನೀಡುತ್ತಿರುವ ಯುವಕರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅವರು ಮೂಲ ಕೇರಳದ ಯುವಕರಾಗಿದ್ದು ಅಲ್ಲಿ ದೂರನ್ನು ಕೊಟ್ಟರೂ ಸ್ವೀಕರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಯುವತಿ ಜೊತೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗುವುದು ಎಂದು ತಿಳಿದುಬಂದಿದೆ.

ಬೆಂಗಳೂರಿನ ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಗೆ ಭಾನುವಾರ ಬೆಳಗ್ಗೆ 11.30ರ ಸುಮಾರಿಗೆ ಅತ್ಯಾಚಾರಕ್ಕೊಳಗಾಗಿರುವ ಯುವತಿಯೊಂದಿಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ ಅವರು ತೆರಳಿ ದೂರು ಸಲ್ಲಿಸಲಿದ್ದಾರೆ. ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ಗೆ ಕಂಪ್ಲೇಂಟ್‌ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿ: ರಾಜ್ಯದಲ್ಲಿ ಮತ್ತೆ 'ಲವ್ ಜಿಹಾದ್' ಸದ್ದು! ಸಿಎಂಗೆ ದೂರುಕೊಟ್ಟ ಶೋಭಾ ಕರಂದ್ಲಾಜೆ

ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಬಂಧನ

ನಡುರಸ್ತೆಯಲ್ಲಿ ಕಾರ್‌ ನಿಲ್ಲಿಸಿ ಮಹಿಳೆ ದಿಢೀರ್‌ ಪ್ರತಿಭಟನೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ