ಆ್ಯಪ್ನಗರ

ಮೋದಿಗೆ ಮತ: ವೋಟರ್ಸ್ ಮೇಲೆ ಸಿದ್ದರಾಮಯ್ಯ ಟ್ವೀಟ್ ವಾರ್

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆ.ಎಚ್‌.ಮುನಿಯಪ್ಪ ಬಳಿಕ ಇದೀಗ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರ ವಿರುದ್ಧ ಅಸಮಾಧಾನ ತೋಡಿಕೊಂಡಿದ್ದಾರೆ.

Vijaya Karnataka Web 30 Jun 2019, 9:06 am
ಬೆಂಗಳೂರು: 17ನೇ ಸಾರ್ವತ್ರಿಕ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದಕ್ಕಿಂತ ಹೆಚ್ಚಾಗಿ ಜನತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮತದಾರರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web siddaramaiah


ಚುನಾವಣಾ ಕಾಲದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದು, ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಜಾರಿಗೆ ತರುವುದು ಆಡಳಿತ ಪಕ್ಷದ ಕರ್ತವ್ಯ ಹೇಗೋ, ಹಾಗೆಯೇ ನುಡಿದಂತೆ ನಡೆದವರನ್ನು ಬೆಂಬಲಿಸುವುದು ಮತದಾರರ ಜವಾಬ್ದಾರಿ. ಪ್ರಜಾಪ್ರಭುತ್ವದ ಬಲವರ್ಧನೆಗೆ ಇಂತಹ ಚರ್ಚೆ ಸಹಕಾರಿ ಎಂದವರು ಟ್ವೀಟ್ ಮಾಡಿದ್ದಾರೆ.


ಜನ ಏನು ನೋಡಿ ಬಿಜೆಪಿ ಗೆ ಓಟ್ ಹಾಕ್ತಾರೆ ನನಗೆ ಗೊತ್ತಾಗುತ್ತಿಲ್ಲ. ಕೆಲಸ ಮಾಡಿದವರು ನಾವು, ವೋಟ್ ಬಿಜೆಪಿಗೆ ಹಾಕ್ತಾರೆ, ಯಾಕೆ? ಪಂಚಾಯಿತಿಗೆ ಅನುದಾನ, ಅನ್ನಭಾಗ್ಯ, ಶೂಭಾಗ್ಯ ತಂದಿದ್ದು ನಾವು, ವಿದ್ಯಾ ಸಿರಿ ತಂದಿದ್ದು ನಾವು. ವೋಟು ಮಾತ್ರ ಬಿಜೆಪಿಗೆ ಏಕೆ ಎಂದು ಮೊನ್ನೆಯಷ್ಟೆ ಬಾದಾಮಿಯಲ್ಲಿ ಮತದಾರರನ್ನೇ ಸಿದ್ದರಾಮಯ್ಯ ಪ್ರಶ್ನಿಸಿದರು.

ಸಿದ್ದರಾಮಯ್ಯ ಕೊಟ್ಟ ಅಕ್ಕಿ ಉಂಡು, ಮೋದಿಗೆ ವೋಟು ಹಾಕಿರುವುದು ದುರ್ದೈವ: ಮುನಿಯಪ್ಪ

ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದು, ಮೋದಿಗೆ ವೋಟು ಹಾಕಿರುವುದು ಎಂತಹ ದುರ್ದೈವ ಎಂದು ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಮತದಾರರ ವಿರುದ್ಧ ಕಿಡಿಕಾರಿದರು. ಜತೆಗೆ ತಾವು ಯಾವ ಅರ್ಥದಲ್ಲಿ ಹಾಗೆ ಹೇಳಿದ್ದೇನೆ ಎಂಬುದಕ್ಕೂ ಸ್ಪಷ್ಟನೆ ನೀಡಿದರು.

ಶನಿವಾರ ಕೋಲಾರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ''ಸಿದ್ದರಾಮಯ್ಯ ಅವರು ರಾಜ್ಯದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆದರೆ, ಮೋದಿ ಯಾರಿಗೂ ಉದ್ಯೋಗ ಕೊಟ್ಟಿಲ್ಲ, ನೋಟು ಅಮಾನ್ಯ, ಜಿಎಸ್‌ಟಿ ತಂದು ಜನರಿಗೆ ತೊಂದರೆ ಕೊಟ್ಟಿದ್ದಾರೆ. ಆದರೂ ಜನರು ಅವರಿಗೆ ಮತ ಹಾಕಿದ್ದಾರೆ,'' ಎಂದು ಸಮಜಾಯಿಷಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ