ಆ್ಯಪ್ನಗರ

ಸಂವಿಧಾನ ತಿದ್ದುಪಡಿ ಮಾಡಲು ಮುಟ್ಟಿದರೆ ದಂಗೆಯಾಗುತ್ತದೆ: ಸಿದ್ದರಾಮಯ್ಯ

ಅನಂತ್‌ ಕುಮಾರ್‌ ಹೆಗಡೆಗೆ ಟಾಂಗ್‌ ನೀಡಿದ ಸಿಎಂ

Vijaya Karnataka Web 28 Dec 2017, 5:54 pm
ತುಮಕೂರು: ಸಂವಿಧಾನ ಬದಲಾವಣೆಗೆ ಕೈ ಹಾಕಿದರೆ ದೇಶದಲ್ಲಿ ದಂಗೆಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.
Vijaya Karnataka Web siddaramaiah attacks bjp
ಸಂವಿಧಾನ ತಿದ್ದುಪಡಿ ಮಾಡಲು ಮುಟ್ಟಿದರೆ ದಂಗೆಯಾಗುತ್ತದೆ: ಸಿದ್ದರಾಮಯ್ಯ


ಸಿರಾ ನಗರದ ವಿವೇಕಾನಂದ ಮೈದಾನದಲ್ಲಿ ಗುರುವಾರ ನಡೆದ ಸರಕಾರದ ಸಾಧನ ಸಂಭ್ರಮ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಗೆ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಹಬಾಳ್ವೆ ಸಂದೇಶ ಸಾರುವ ಅಂಬೇಡ್ಕರ್ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಅವರಿಗೆ ಜಾತಿಗಳ ನಡುವೆ ವಿಷ ಬೀಜ ಬಿತ್ತಿ, ಧರ್ಮಗಳ ನಡುವೆ ಸಂಘರ್ಷ ತಂದಿಟ್ಟು ಆ ಮ‌ೂಲಕ ಅಧಿಕಾರಕ್ಕೆ ಬಂದು ಯಥಾಸ್ಥಿತಿ ಯನ್ನು ಮುಂದುವರೆಸುವುದು ಅವರ ಉದ್ದೇಶ ಎಂದರು

ದೇಶದ ಸಂವಿಧಾನ ಬದಲಾವಣೆಗೆ ಮುಟ್ಟಿದ್ದೇ ಆದಲ್ಲಿ ದಂಗೆಯಾಗುತ್ತದೆ ಎಂದು ಪುನರುಚ್ಚರಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ನೀರಾವರಿಗೆ ಒಂದು ಲಕ್ಷ ಕೋಟಿ ರೂ. ವೆಚ್ಚ ಮಾಡುವುದಾಗಿ ಯಡಿಯೂರಪ್ಪ ಹೇಳುತ್ತಾರೆ. ಈ ಹಿಂದೆ ಅಧಿಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ. ನಾವು ಕಳೆದ ಐದು ವರ್ಷಗಳಲ್ಲಿ ಐವತ್ತು ಸಾವಿರ ಕೋಟಿ ರೂ.ವೆಚ್ಚ ಮಾಡಿದ್ದೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ