ಆ್ಯಪ್ನಗರ

ದೇವೇಗೌಡರಿಗೆ ಹಾಸನ ಎಂದರೆ ಕರ್ನಾಟಕ: ಸಿದ್ದರಾಮಯ್ಯ ಲೇವಡಿ

ಮಾಜಿ ಪ್ರಧಾನಿಗೆ ಟಾಂಗ್‌ ನೀಡಿದ ಮುಖ್ಯಮಂತ್ರಿ

Vijaya Karnataka Web 28 Dec 2017, 7:43 pm
ಶಿರಾ: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಕರ್ನಾಟಕ ಎಂದರೆ ಹಾಸನ ಮಾತ್ರ. ಹಾಸನ ಎಂದರೆ ಕರ್ನಾಟಕ. ಇದನ್ನು ಬಿಟ್ಟು ಅವರಿಗೆ ಬೇರೆ ಯಾವುದು ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
Vijaya Karnataka Web siddaramaiah attacks hdd
ದೇವೇಗೌಡರಿಗೆ ಹಾಸನ ಎಂದರೆ ಕರ್ನಾಟಕ: ಸಿದ್ದರಾಮಯ್ಯ ಲೇವಡಿ


ಶಿರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಹಾಸನ ಬಿಟ್ಟು ಕಡೆ ಯಾವುದೇ ನೀರಾವರಿ ವ್ಯವಸ್ಥೆಯನ್ನು ದೇವೇಗೌಡರು ಮಾಡಿಲ್ಲ ಎಂದರು.

ಇನ್ನು ಜೆಡಿಎಸ್‌ ಅಧಿಕಾರಕ್ಕೆ ಬಂದರೆ ದಲಿತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂದು ಆ ಪಕ್ಷದ ನಾಯಕರು ಹೇಳಿದ್ದಾರೆ. ದಲಿತರನ್ನೇ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಜೆಡಿಎಸ್‌ ಹೇಳಲಿ ಎಂದು ತಿರುಗೇಟು ನೀಡಿದರು.

ದೇವೇಗೌಡರಿಗೆ ತಮ್ಮ ಮಗನನ್ನು ಸಿಎಂ ಮಾಡಬೇಕೆಂಬ ಮನಸ್ಸಿದೆ. ಅವರ ಕುಟುಂಬದವರಿಗೆ ಬಿಟ್ಟು ಬೇರೆ ಯಾರಿಗೂ ಮುಖ್ಯಮಂತ್ರಿ ಸ್ಥಾನ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ದಲಿತರನ್ನು ಮುಖ್ಯಮಂತ್ರಿ ಮಾಡುವ ಮನಸ್ಸು ಅವರದಲ್ಲ. ಹಾಗಾಗಿ ದಲಿತರಿಗೆ ಸ್ಥಾನಮಾನ ನೀಡಲ್ಲ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯನ್ನು ತಿರಸ್ಕರಿಸಿ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ