ಆ್ಯಪ್ನಗರ

ಕಾರ್ನಾಡರ ಸಾವನ್ನು ಸಂಭ್ರಮಿಸಿದ್ದವರ ವಿರುದ್ಧ ಸಿದ್ದರಾಮಯ್ಯ ಚಾಟಿ

ಗಿರೀಶ್ ಕಾರ್ನಾಡ್ ಅವರು ಸೋಮವಾರ ವಿಧಿವಶರಾಗಿದ್ದು ಗೊತ್ತೇ ಇದೆ. ಅವರ ಸೈದ್ಧಾಂತಿಕ ನಿಲುವುಗಳನ್ನು ಒಪ್ಪದ ಕೆಲವರು ಕಾರ್ನಾಡರ ಸಾವನ್ನು ಸಂಭ್ರಮಿಸಿ ವಿಕೃತ ಆನಂದ ಮೆರೆದಿದ್ದರು. ಕಾರ್ನಾಡರ ಸಾವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸಂಭ್ರಮಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದರು.

Vijaya Karnataka Web 11 Jun 2019, 11:46 am
ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ, ವಿಚಾರವಾದಿ, ನಾಟಕಕಾರ ಗಿರೀಶ್ ಕಾರ್ನಾಡ್ ಅವರ ಸಾವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸಂಭ್ರಮಿಸಿದ್ದ ವಿಕೃತ ಮನಸ್ಥಿತಿಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿದ್ದಾರೆ. "ಸಾವಿನ ಸಂಭ್ರಮ ಕೊಲೆಯಷ್ಟೇ ಘೋರ ಕೃತ್ಯ" ಎಂದು ಖಂಡಿಸಿದ್ದಾರೆ.
Vijaya Karnataka Web siddaramaiah


ಗಿರೀಶ್ ಕಾರ್ನಾಡ್ ಅವರು ಸೋಮವಾರ ವಿಧಿವಶರಾಗಿದ್ದು ಗೊತ್ತೇ ಇದೆ. ಅವರ ಸೈದ್ಧಾಂತಿಕ ನಿಲುವುಗಳನ್ನು ಒಪ್ಪದ ಕೆಲವರು ಕಾರ್ನಾಡರ ಸಾವನ್ನು ಸಂಭ್ರಮಿಸಿ ವಿಕೃತ ಆನಂದ ಮೆರೆದಿದ್ದರು. ಕಾರ್ನಾಡರ ಸಾವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಸಂಭ್ರಮಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದರು.

ಈ ನಡೆಯನ್ನು ಖಂಡಿಸಿ ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, "ಸಾವಿನ ಸಂಭ್ರಮ ಕೊಲೆಯಷ್ಟೆ ಘೋರ ಕೃತ್ಯ. ಅದು ಕಾರ್ನಾಡರದ್ದಾಗಲಿ, ಕಾಂಗ್ರೆಸಿಗನದ್ದಾಗಲಿ ಅಥವಾ ಬಿಜೆಪಿಯವರದ್ದಾಗಲಿ. ಸೈದ್ಧಾಂತಿಕ ವಿರೋಧಕ್ಕಾಗಿ ಯಾರೂ ಸಾವು ಸಂಭ್ರಮಿಸುವಂಥ ಶತ್ರುಗಳಾಗಬಾರದು. 'ಬಿತ್ತಿದನ್ನೇ ಫಸಲಾಗಿ ಪಡೆಯುತ್ತೇವೆ'. ಹಾಗಾಗಿ ಬಿತ್ತುವುದಾದರೆ ಮಾನವೀಯತೆ ಮತ್ತು ಸೌಹಾರ್ದತೆಯನ್ನು ಬಿತ್ತೋಣ" ಎಂದಿದ್ದಾರೆ.

ಇದರ ಜತೆಗೆ ಬಸವಣ್ಣನವರ ಫೋಟೋ ಜತೆಗೆ "ಮಾನವ ಜನ್ಮ ದೊಡ್ಡದಲ್ಲಾ ಮಾನವೀಯತೆ ದೊಡ್ಡದು, ಧರ್ಮ ದೊಡ್ಡದಲ್ಲಾ ದಯೆ ದೊಡ್ಡಡು" ಎಂಬ ಉಕ್ತಿಯನ್ನೂ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ಟ್ವೀಟ್‌ಗೆ ಸಾಕಷ್ಟು ಪ್ರತಿಕ್ರಿಯೆಗಳೂ ಬರುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ