ಆ್ಯಪ್ನಗರ

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ, ಅಲ್ಪಸಂಖ್ಯಾತರನ್ನು ಮೂಲೆಗುಂಪು ಮಾಡಲಾಗ್ತಿದೆ: ರೇಣುಕಾಚಾರ್ಯ

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಅಧಿಕಾರ ವಹಿಸಿಕೊಂಡ ಬಳಿಕ ಎಲ್ಲೂ ಹಿಂದೂ- ಮುಸ್ಲಿಂ ಗಲಭೆಗಳು ಆಗಿಲ್ಲ. ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್‍ನವರು ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿದ್ದರಿಂದ ಸಣ್ಣಪುಟ್ಟ ಘಟನೆಗಳು ಆಗಿವೆ.

Vijaya Karnataka Web 17 Nov 2021, 1:37 pm
ಬೆಂಗಳೂರು: ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ರಾಜ್ಯದ ಅಧ್ಯಕ್ಷರ ಪದಗ್ರಹಣ ಸಂದರ್ಭದಲ್ಲಿ ಶಾಸಕ ಜಮೀರ್ ಅಹ್ಮದ್ ಕಡಗಣನೆ ಮಾಡಿದ ಘಟನೆ ನಡೆದಿದೆ. ಕಾಂಗ್ರೆಸ್‍ನವರು ಇದುವರೆಗೆ ಉದ್ಧಾರಕರು ಎಂದುಕೊಂಡೇ ಬಂದವರು. ಆದರೆ, ಅವರು ಅಲ್ಪಸಂಖ್ಯಾತರ ಉದ್ಧಾರ ಮಾಡಿಲ್ಲ. ಬದಲಾಗಿ ಅವರನ್ನು ಬಳಸಿ ಬಿಸಾಡುವ ರೀತಿಯಲ್ಲಿ ಮತಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಇದನ್ನು ಅಲ್ಪಸಂಖ್ಯಾತರು ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿ ಶಾಸಕ‌ ಎಂಪಿ ರೇಣುಕಾಚಾರ್ಯ ತಿಳಿಸಿದರು.
Vijaya Karnataka Web ರೇಣುಕಾಚಾರ್ಯ
ರೇಣುಕಾಚಾರ್ಯ


ಬೆಂಗಳೂರು ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಅಧಿಕಾರ ವಹಿಸಿಕೊಂಡ ಬಳಿಕ ಎಲ್ಲೂ ಹಿಂದೂ- ಮುಸ್ಲಿಂ ಗಲಭೆಗಳು ಆಗಿಲ್ಲ. ರಾಜ್ಯದಲ್ಲೂ ಬಿಜೆಪಿ ಸರಕಾರ ಅಧಿಕಾರದಲ್ಲಿದೆ. ಕಾಂಗ್ರೆಸ್‍ನವರು ಎಲ್ಲೋ ಒಂದು ಕಡೆ ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿದ್ದರಿಂದ ಸಣ್ಣಪುಟ್ಟ ಘಟನೆಗಳು ಆಗಿವೆ. ಗಂಭೀರವಾದ ಗಲಭೆ ಆಗಿಲ್ಲ ಎಂದರು.

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜಮೀರ್ ಅಹಮದ್ ಖಾನ್ ಕಡೆಗಣನೆ, ಬೆಂಬಲಿಗರ ಆಕ್ರೋಶ

ಕುಟುಂಬದ ಪಕ್ಷ ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯರ ಬೆಂಬಲಿಗರನ್ನು ನೂರಕ್ಕೆ ನೂರು ರಾಜಕೀಯವಾಗಿ ಮುಗಿಸಲು ಮುಂದಾಗಿದ್ದಾರೆ. ಜಮೀರ್ ಅಹ್ಮದ್ ಮತ್ತು ಇತರ ಮುಸ್ಲಿಮರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಸರಕಾರವು ಮುಸ್ಲಿಮರಿಗಾಗಿ ಅನೇಕ ಕಾರ್ಯಕ್ರಮ, ಯೋಜನೆಗಳನ್ನು ರೂಪಿಸಿದೆ. ಕಾಂಗ್ರೆಸ್‍ನಿಂದ ಅಲ್ಪಸಂಖ್ಯಾತರು ದೂರವಾಗಲಿದ್ದಾರೆ ಎಂದು ರೇಣುಕಾಚಾರ್ಯ ತಿಳಿಸಿದರು.

ಇಮ್ರಾನ್ ಪಾಷಾ ಅವರು ಮಂಗಳವಾರ ಸಭೆಯಲ್ಲಿ ಮಾತನಾಡಿ, ನಾವು ಟಿಪ್ಪು ಸುಲ್ತಾನ್ ವಂಶದವರು, ತಲೆ ತೆಗೆಯಲೂ ಸಿದ್ಧ ಎಂದು ಹೇಳಿದ್ದು, ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ಇದು ಪಾಕಿಸ್ತಾನ ಅಥವಾ ತಾಲಿಬಾನ್ ಅಲ್ಲ. ಇದು ಭಾರತ. ಇಲ್ಲಿ ಆಟವಾಡಲು ಬಂದರೆ ನಮಗೂ ಗೊತ್ತಿದೆ. ಅವರು ಹಿಂದೂಗಳ ಬೇಷರತ್ ಕ್ಷಮೆ ಕೇಳಬೇಕೆಂದು ರೇಣುಕಾಚಾರ್ಯ ಆಗ್ರಹಿಸಿದರು.

ಸಿದ್ದರಾಮಯ್ಯ ಭಾಷಣಕ್ಕೆ ಜಮೀರ್ ಬೆಂಬಲಿಗರ ಅಡ್ಡಿ! ವೇದಿಕೆ ತೊರೆದ ಮಾಜಿ ಸಿಎಂ; ಡಿಕೆಶಿ ಉಚ್ಛಾಟನೆಯ ಎಚ್ಚರಿಕೆ

ಬಿಟ್ ಕಾಯಿನ್ ಪ್ರಕರಣ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಆಗಿದೆ. ಕಾಂಗ್ರೆಸ್ ಶಾಸಕರ ಮಕ್ಕಳು ಇದರಲ್ಲಿ ಭಾಗಿಯಾಗಿದ್ದಾರೆ. ನೀವು ಆಗಲೇ ಕ್ರಮ ಕೈಗೊಳ್ಳಬೇಕಿತ್ತಲ್ಲವೇ? ಬಿಟ್ ಕಾಯಿನ್ ಕುರಿತ ದಾಖಲೆ ಬಿಡುಗಡೆ ಮಾಡಿ, ಅಧಿವೇಶನದಲ್ಲಿ ಚರ್ಚೆಗೆ ಬನ್ನಿ ಎಂದು ಸವಾಲೆಸೆದರು.

ದೇಶ- ರಾಜ್ಯವನ್ನು ಲೂಟಿ ಹೊಡೆದ ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲು ಮಾಡಲು ಬಿಜೆಪಿ ಸಿದ್ಧವಿದೆ. ಸಿದ್ದರಾಮಯ್ಯ, ಪ್ರಿಯಾಂಕ್, ಸುರ್ಜೇವಾಲಾ ಅವರ ಬುಟ್ಟಿಯಲ್ಲಿ ಹಾವಿಲ್ಲ. ಸುಮ್ಮನೆ ಹೆದರಿಸಲು ನೋಡುತ್ತಿದ್ದಾರೆ ಎಂದು ರೇಣುಕಾಚಾರ್ಯತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ