ಆ್ಯಪ್ನಗರ

ಕಾರ್ಮಿಕರ ಬವಣೆಯನ್ನು ಪರಿಹರಿಸಲು ವಿಶೇಷ ಪ್ಯಾಕೇಜ್‌ ಘೋಷಿಸಿ, ಬಿಎಸ್‌ವೈಗೆ ಸಿದ್ದರಾಮಯ್ಯ ಪತ್ರ

ಕಾರ್ಮಿಕರ ಬವಣೆಯನ್ನು ಪರಿಹರಿಸಲು ವಿಶೇಷ ಪ್ಯಾಕೇಜ್ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಪತ್ರವನ್ನು ಬರೆಯುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Vijaya Karnataka Web 5 Apr 2020, 5:33 pm
ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಕಾರಣದಿಂದಾಗಿ ತೊಂದರೆಯನ್ನು ಅನುಭವಿಸುತ್ತಿರುವ ಕಾರ್ಮಿಕರ ಬವಣೆಯನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಆಗ್ರಹಿಸಿದ್ದಾರೆ.
Vijaya Karnataka Web siddaramayha


ಕೊರೊನಾ ಕಾರಣದಿಂದಾಗಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ವಿವಿಧ ವಲಯಗಳ ಉದ್ಯಮಗಳ ನೌಕರರು ತುಂಬಾ ಸಂಕಷ್ಟದಲ್ಲಿದ್ದು ಅವರಿಗೆ ಅನುಕೂಲವಾಗುವ ಒಂದು ವಿಶೇಷ ಪ್ಯಾಕೇಜ್ ಅನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‌ವೈ ಅವರಿಗೆ ಪತ್ರ ಬರೆದಿದ್ದಾರೆ.

ಲಾಕ್‌ಡೌನ್‌ನ ಉಳಿದ 10 ದಿನ ಹೀಗೆ ಮಾಡಿ, ಕ್ವಾರಂಟೈನ್‌ನ್ನು ಅವಕಾಶವನ್ನಾಗಿ ಪರಿರ್ತಿಸಿ..!

ಕೊರೊನಾ ವೈರಸ್‌ನಿಂದಾಗಿ ಉತ್ಪಾದನಾ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಿದೆ. ಗೃಹಾಧಾರಿತ ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆಗಳು ಜೀವನ್ಮರಣ ಸಂಕಷ್ಟವನ್ನು ಎದುರಿಸುತ್ತಿವೆ. ಇದರಿಂದಾಗಿ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ಉದ್ಯೋಗ ಕಳೆದುಕೊಂಡು ಬೀದಿಗೆ ಬೀಳುತ್ತಿದ್ದಾರೆ.

ಇದರಲ್ಲಿ ಅಸಂಘಟಿತ ವಲಯಗಳ ಕಾರ್ಮಿಕರು ಆಹಾರಕ್ಕೂ ಪರದಾಡಬೇಕಾದ ಪರಿಸ್ಥಿತಿ ಇದೆ. ದಿನದ ದುಡಿಮೆಯನ್ನು ಆಧರಿಸಿ ಬದುಕುತ್ತಿದ್ದ ಇವರುಗಳ ರಕ್ಷಣೆಗೆ ಸರ್ಕಾರ ತುರ್ತಾಗಿ ಧಾವಿಸಬೇಕಾಗಿದೆ. ರೈತ, ಕೂಲಿ, ಕಾರ್ಮಿಕರಿಲ್ಲದ ಆರ್ಥಿಕತೆಯನ್ನು ಕಲ್ಪಿಸಿಕೊಳ್ಳಲಿ ಸಾಧ್ಯವಿಲ್ಲ. ಹಾಗಾಗಿ ಈ ವಲಯಗಳು ಕಷ್ಟದಲ್ಲಿರುವಾಗ ಅವರ ನೆರವಿಗೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ಧಾವಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಕುರಿತಾಗಿ ನೂರಾರು ಕರೆಗಳು ಬರುತ್ತಿದ್ದು ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರಾಯೋಗಿಕವಾಗಿ ವೈಜ್ಞಾನಿಕವಾಗಿ ಪ್ರಬುದ್ಧತೆಯಿಂದ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ